ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೇ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್ಪಿ ಪ್ರಿಯದರ್ಶಿನಿ ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀ ದಯಾನಂದ್ ಸೂಚನೆ ನೀಡಿದ್ದಾರೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಘಟನೆಗೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್ಪಿಗೆ ಪ್ರಿಯದರ್ಶಿನಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸ್ಪಾ ಬಗ್ಗೆ ಸಂಪೂರ್ಣ ಮಾಹಿತಿ ಒಳಗೊಂಡ ವರದಿ ನೀಡುವಂತೆ ಸೂಚಿಸಿದ್ದಾರೆ.
ಇತ್ತೀಚಿಗೆ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯಲ್ಲಿರುವ ನಿರ್ವಾಣ ಸ್ಪಾ ಎಂಬ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಸಿಸಿಬಿ ಮಹಿಳಾ ಸಂರಕ್ಷಣಾ ಅಧಿಕಾರಿಗಳು ದಾಳಿ ನಡೆಸಿದರು.
ದಾಳಿಯ ವೇಳೆ ಸುಮಾರು 40ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು 36 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೇರೆ ರಾಜ ಹಾಗೂ ವಿದೇಶದಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂದೆಡೆಸುತ್ತಿದ್ದ ಸ್ಪಾ ಮಾಲೀಕ ಅನಿಲ್ ಎನ್ನುವವರನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.