Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಿಕವರಿ ಮಾಡಿದ ಚಿನ್ನ ವಂಚನೆ, ದುರ್ಬಳಕೆ: PSI ಸಸ್ಪೆಂಡ್
    ಇತ್ತೀಚಿನ ಸುದ್ದಿ

    ರಿಕವರಿ ಮಾಡಿದ ಚಿನ್ನ ವಂಚನೆ, ದುರ್ಬಳಕೆ: PSI ಸಸ್ಪೆಂಡ್

    March 24, 2025
    Share

    ರಿಕವರಿ ಮಾಡಿದಂತ ಚಿನ್ನವನ್ನು ವಂಚನೆ ಮತ್ತು ದುರ್ಬಳಕೆ ಆರೋಪದಡಿ ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅನ್ನು ಅಮಾನುತುಗೊಳಿಸಲಾಗಿದೆ.

    ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ದಯಾನಂದ್ ಅವರು ಆದೇಶಿಸಿದ್ದಾರೆ. 2020ರಲ್ಲಿ ಪಿಎಸ್ಐ ಸಂತೋಷ್ ಅವರು ಹಲಸೂರು ಗೇಟ್ ಠಾಣೆಯ ಪಿಎಸ್ಐ ಆಗಿದ್ದರು. ಈ ವೇಳೆ ಪ್ರಕರಣವೊಂದರ ರಿಕವರಿ ಚಿನ್ನವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಚಿನ್ನದ ಅಂಗಡಿ ಮಾಲೀಕನ ಬಳಿ ಹೋಗಿ ರಿಕವರಿ ಚಿನ್ನ ತೋರಿಸಬೇಕಿದೆ. ಹೀಗಾಗಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಪೋಟೋ ತೆಗೆಸಿ ವಾಪಾಸ್ ಕೊಡುತ್ತೇನೆ ಎಂಬುದಾಗಿ ಹೇಳಿದ್ದರು.

    ಚಿನ್ನದ ಅಂಗಡಿ ಮಾಲೀಕ ಪಿಎಸ್ಐ ಸಂತೋಷ್ ಮಾತು ನಂಬಿ 950 ಗ್ರಾಂ ಚಿನ್ನದ ಗಟ್ಟಿ ನೀಡಿದ್ದರು. ಬಳಿಕ ಚಿನ್ನದ ಅಂಗಡಿ ಮಾಲೀಕ ಚಿನ್ನವನ್ನು ಪಿಎಸ್ಐ ಸಂತೋಷ್ ಕೇಳಿದಾಗ ಹಣ ನೀಡುವುದಾಗಿ ಭದ್ರತೆಗೆ ಸೈಟ್ ಕರಾರು ಮಾಡಿಕೊಟ್ಟಿದ್ದರು. ಆದರೇ ಆ ಸೈಟ್ ಅನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಮಾಲೀಕ ಮತ್ತೆ ಪ್ರಶ್ನಿಸಿದಾಗ ಖಾಲಿ ಚೆಕ್ ನೀಡಿದ್ದರು. ಅದು ಕೂಡ ಬೌನ್ಸ್ ಆಗಿತ್ತು. ಆದಾದ ಬಳಿಕ ಚಿನ್ನದ ಅಂಗಡಿ ಮಾಲೀಕ ಹಣ, ಚಿನ್ನ ಕೇಳಿದಾಗ ಸಂತೋಷ್ ಬೆದರಿಕೆ ಹಾಕಿದ್ದರು. ಬೇಸತ್ತು ಮಾಲೀಕ ಪಶ್ಚಿಮ ವಿಭಾಗದ ಡಿಸಿಪಿಗೆ ದೂರು ನೀಡಿದ್ದರು.

    ಈ ದೂರು ಆಧರಿಸಿ ಎಸಿಪಿ ನೇತೃತ್ವದಲ್ಲಿ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸಲಾಗಿತ್ತು. ಈ ವರದಿಯನ್ನು ಆಧರಿಸಿ ಪಿಎಸ್ಐ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್ಐ ಸಂತೋಷ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಆಧರಿಸಿ, ಪಿಎಸ್ಐ ಸಂತೋಷ್ ಅವರನ್ನು ಪೊಲೀಸ್ ಕಮೀಷನರ್ ದಯಾನಂದ್ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

    Post Views: 270

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.