Facebook Twitter Instagram
    Wednesday, September 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಂ. ಜಾ. ವೇ. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯನಿಗೆ ಗಡಿಪಾರು ಆದೇಶ…!
    ಇತ್ತೀಚಿನ ಸುದ್ದಿ

    ಹಿಂ. ಜಾ. ವೇ. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯನಿಗೆ ಗಡಿಪಾರು ಆದೇಶ…!

    September 2, 2026
    Share

    ಮಂಗಳೂರು: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜೇಶ್ ನಾಯಕ್ (32) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್. ಕೆ., ಐಪಿಎಸ್ ಆದೇಶ ಹೊರಡಿಸಿದ್ದಾರೆ.

    ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿಯಾಗಿರುವ ರಾಜೇಶ್ ನಾಯಕ್ ಅವರ ವಿರುದ್ಧ ಈ ಹಿಂದೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ರೌಡಿ ಹಾಳೆ ತೆರೆದು ಅವರ ಚಲನವಲನಗಳ ಮೇಲೆ ನಿಗಾ ಇರಿಸಲಾಗಿತ್ತು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ) ಅಡಿಯಲ್ಲಿ ವಿಚಾರಣೆ ನಡೆಸಿದ ಬಳಿಕ, ಅವರ ಚಟುವಟಿಕೆಗಳು ಸಾರ್ವಜನಿಕರಿಗೆ ಭಯ, ಅಪಾಯ ಅಥವಾ ಹಾನಿ ಉಂಟುಮಾಡುವ ಸಾಧ್ಯತೆ ಇದೆ ಎಂಬ ಅಂಶಗಳು ಕಂಡುಬಂದಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಕಲಂ 55(ಬಿ)ಗೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

    ಸಾರ್ವಜನಿಕ ಶಾಂತಿ, ನೆಮ್ಮದಿ, ಸೌಹಾರ್ದತೆ, ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಾಜೇಶ್ ನಾಯಕ್ ಅವರನ್ನು ಅವರ ಅಪರಾಧ ಚಟುವಟಿಕೆಗಳ ಪರಿಸರದಿಂದ ದೂರವಿಡುವುದು ಅಗತ್ಯವೆಂದು ಪರಿಗಣಿಸಿ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ.

    ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶದಂತೆ ರಾಜೇಶ್ ನಾಯಕ್ ಅವರನ್ನು 2026ರ ಆಗಸ್ಟ್ 26ರಿಂದ 2027ರ ಫೆಬ್ರವರಿ 26ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಬೆಳಗಾವಿ ಜಿಲ್ಲೆಯ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವಂತೆ ಸೂಚಿಸಲಾಗಿದೆ.

    ಗಡಿಪಾರು ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

    ಅಲ್ಲದೆ, ಪ್ರತಿ ಏಳು ದಿನಗಳಿಗೊಮ್ಮೆ ಸವದತ್ತಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮುಂದೆ ಹಾಜರಾಗಿ ಹಾಜರಾತಿ ದಾಖಲಿಸಿಕೊಳ್ಳಬೇಕು ಎಂದು ಆದೇಶಿಸಲಾಗಿದೆ.

    ರಾಜೇಶ್ ನಾಯಕ್ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ನಿಗದಿಪಡಿಸುವ ವಿಚಾರಣಾ ದಿನಾಂಕಗಳಲ್ಲಿ ಹಾಜರಾಗಲು ಮಾತ್ರ ಅನುಮತಿ ನೀಡಲಾಗಿದೆ. ನ್ಯಾಯಾಲಯದ ವಿಚಾರಣೆ ಮುಗಿದ ಬಳಿಕ ಅದೇ ದಿನ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಮರಳುವಂತೆ ಸೂಚಿಸಲಾಗಿದೆ.

    ಗಡಿಪಾರು ಆದೇಶವನ್ನು ಉಲ್ಲಂಘಿಸಿದಲ್ಲಿ ಅವರನ್ನು ಬಂಧಿಸಿ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕಳುಹಿಸುವುದು ಹಾಗೂ ಅವರು ಆದೇಶ ಪಾಲಿಸುತ್ತಿರುವ ಬಗ್ಗೆ ನಿಗಾ ವಹಿಸುವಂತೆ ಪೊಲೀಸ್ ನಿರೀಕ್ಷಕರು, ವಿಟ್ಲ ಪೊಲೀಸ್ ಠಾಣೆಯವರಿಗೆ ಸೂಚಿಸಲಾಗಿದೆ.

    ಆದೇಶದಿಂದ ಅಸಮಾಧಾನಗೊಂಡಿದ್ದಲ್ಲಿ, ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 59ರ ಅನ್ವಯ ಆದೇಶ ಸ್ವೀಕರಿಸಿದ 30 ದಿನಗಳೊಳಗೆ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇಲ್ಮನವಿಯನ್ನು ಅಪರ ಮುಖ್ಯ ಕಾರ್ಯದರ್ಶಿ, ಒಳಾಡಳಿತ ಇಲಾಖೆ, ವಿಧಾನಸೌಧ, ಬೆಂಗಳೂರು ಅವರಿಗೆ ಸಲ್ಲಿಸಬಹುದಾಗಿದೆ.

    Post Views: 6

    Related Posts

    ಬಂಟ್ವಾಳ: ಯತೀಶ್ ಪೆರುವಾಯಿ ವಿರುದ್ಧದ ಗಡಿಪಾರು ಆದೇಶ ರದ್ದು..!!

    September 2, 2026

    ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ವಂಚನೆ- ಆರೋಪಿಗೆ ಶಿಕ್ಷೆ ಪ್ರಕಟ

    September 2, 2026

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

    September 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯತೀಶ್ ಪೆರುವಾಯಿ ವಿರುದ್ಧದ ಗಡಿಪಾರು ಆದೇಶ ರದ್ದು..!!

    September 2, 2026

    ಹಿಂ. ಜಾ. ವೇ. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯನಿಗೆ ಗಡಿಪಾರು ಆದೇಶ…!

    September 2, 2026

    ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ವಂಚನೆ- ಆರೋಪಿಗೆ ಶಿಕ್ಷೆ ಪ್ರಕಟ

    September 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.