Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ರಜನಿಕಾಂತ್​ : ರಿಷಬ್​ ಶೆಟ್ಟಿಗೆ ಶಹಬ್ಬಾಸ್ ಎಂದ ತಲೈವಾ
    ಇತ್ತೀಚಿನ ಸುದ್ದಿ

    ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ರಜನಿಕಾಂತ್​ : ರಿಷಬ್​ ಶೆಟ್ಟಿಗೆ ಶಹಬ್ಬಾಸ್ ಎಂದ ತಲೈವಾ

    October 26, 2022
    Share

    ಕನ್ನಡದ ‘ಕಾಂತಾರ’ (Kantara) ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಸಿನಿಮಾ ನೋಡಿ ಪರಭಾಷೆಯ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಭೇಷ್​ ಎನ್ನುತ್ತಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ಅವರ ನಟನೆ, ನಿರ್ದೇಶನಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿಬರುತ್ತಿದೆ.

    ಈಗಾಗಲೇ ಪ್ರಭಾಸ್​, ಕಂಗನಾ ರಣಾವತ್​, ಅನುಷ್ಕಾ ಶೆಟ್ಟಿ ಸೇರಿದಂತೆ ಅನೇಕ ಘಟಾನುಘಟಿಗಳು ಈ ಚಿತ್ರದ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈಗಿನದ್ದು ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಸರದಿ. ಹೌದು, ರಜನಿಕಾಂತ್​ ಅವರು ‘ಕಾಂತಾರ’ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಚಿತ್ರ ತುಂಬ ಇಷ್ಟ ಆಗಿದೆ. ಇಂಥ ಸಿನಿಮಾವನ್ನು ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್​’ ಮತ್ತು ನಿರ್ದೇಶನ ಮಾಡಿದ ರಿಷಬ್​ ಶೆಟ್ಟಿ ಅವರನ್ನು ತಲೈವಾ ಮನಸಾರೆ ಹೊಗಳಿದ್ದಾರೆ.

    ರಜನಿಕಾಂತ್​ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮಾಡಿದ ಟ್ವೀಟ್​ ವೈರಲ್​ ಆಗಿದೆ. ಇದನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ರೀಟ್ವೀಟ್​ ಮಾಡಿಕೊಂಡಿದ್ದು, ತಲೈವಾಗೆ ಧನ್ಯವಾದ ತಿಳಿಸಿದೆ. ಇಂಥ ಲೆಜೆಂಡರಿ ನಟನಿಂದ ಕನ್ನಡದ ಸಿನಿಮಾಗೆ ಪ್ರಶಂಸೆ ಸಿಕ್ಕಿರುವುದು ಎಲ್ಲರಿಗೂ ಹೆಮ್ಮೆ ತಂದಿದೆ. ‘ಕಾಂತಾರ ಸಿನಿಮಾ ನೋಡುವಾಗ ರೋಮಾಂಚನ ಆಯಿತು. ರಿಷಬ್​ ಶೆಟ್ಟಿ ಅವರಿಗೆ ಹ್ಯಾಟ್ಸಾಫ್​. ಭಾರತೀಯ ಚಿತ್ರರಂಗದಲ್ಲಿ ಮಾಸ್ಟರ್​ ಪೀಸ್​ ಎನಿಸಿಕೊಂಡಿರುವ ಈ ಚಿತ್ರದ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಜನಿಕಾಂತ್​ ಟ್ವೀಟ್​ ಮಾಡಿದ್ದಾರೆ.

    ತುಳುನಾಡಿನ ಭೂತ ಕೋಲ ಕುರಿತ ಕಥೆಯನ್ನು ‘ಕಾಂತಾರ’ ಚಿತ್ರ ಒಳಗೊಂಡಿದೆ. ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಕಿಶೋರ್​ ಮುಂತಾದವರ ಪಾತ್ರಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆ. ಸೆ.30ರಂದು ಈ ಚಿತ್ರ ಕನ್ನಡದಲ್ಲಿ ರಿಲೀಸ್​ ಆಯಿತು. ಬಳಿಕ ಬೇರೆ ಬೇರೆ ಭಾಷೆಗಳಿಗೂ ಡಬ್​ ಆಗಿ ತೆರೆಕಂಡಿತು. ಎಲ್ಲ ಭಾಷೆಗಳಲ್ಲೂ ಪ್ರೇಕ್ಷಕರು ‘ಕಾಂತಾರ’ ಚಿತ್ರಕ್ಕೆ ಮನಸೋತಿದ್ದಾರೆ.

    Post Views: 358

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.