Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ‘ರಕ್ಷಿತ್‌ ಪಡ್ರೆ’ಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ
    ಇತ್ತೀಚಿನ ಸುದ್ದಿ

    ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ‘ರಕ್ಷಿತ್‌ ಪಡ್ರೆ’ಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ

    January 21, 2024
    Share

    ಮಂಗಳೂರು: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್‌ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್‌ ಕುಮಾರ್‌ ಹಾಗೂ ಚಲನಚಿತ್ರ ನಟ ವಿಘ್ನೇಶ್‌ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
    ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಉಳಿಸಿ, ಬೆಳೆಸುವ ಕೈಂಕರ್ಯದಲ್ಲೂ ತೊಡಗಿಕೊಂಡಿದ್ದಾರೆ.
    ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂ ಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
    ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ.
    22ಕ್ಕೆ ಕುಂದೇಶ್ವರ ಜಾತ್ರೆ:
    ಜ. 21ರಂದು ಬೆಳಗ್ಗೆ 10.30ರಿಂದ ಪ್ರಾರ್ಥನೆ, ತೋರಣ ಮುಹೂರ್ತ ಗಣಯಾಗ, ಮಹಾಪೂಜೆ, ಸಾಯಂಕಾಲ 7 ಗಂಟೆಗೆ ಆರಾಧನ ಪೂಜೆ ನಡೆಯಲಿದೆ. ಜ.22 ರಂದು ಬೆಳಗ್ಗೆ 8 ಗಂಟೆಗೆ ಪಂಚವಿಂಶತಿ ಕಲಾಧಿವಾಸ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಪೂಜೆ, ಧ್ವಜಾರೋಹಣ, ಅವಸ್ತುತ ಬಲಿ, ಪಲ್ಲಪೂಜೆ ನಡೆಯಲಿದ್ದು, ಸಂಜೆ 6.30ರಿಂದ ಮಹೋತ್ಸವ, ಉತ್ಸವ ಬಲಿ, ಅವಭೃತ ಕಟ್ಟೆಪೂಜೆ, ದೈವ ಭೇಟಿ, ಅಗ್ನಿಕೇಳಿ, ರಂಗಪೂಜೆಯಾಗಿ ಧ್ವಜಾವರೋಣವಾಗಲಿದೆ. ಜ. 23ರಂದು ನವಕಪ್ರಧಾನ ಹೋಮ, ಸಂಪ್ರೋಕ್ಷಣೆ ಹಾಗೂ ಪ್ರಸಾದ ವಿತರಣೆ. ಧಾರ್ಮಿಕ ಕಾರ್ಯಕ್ರಮಗಳು ಕೌಡೂರು ವೇ.ಮೂ. ಭಗೀರಥ ಭಟ್‌, ಕುಂದೇಶ್ವರ ಕೃಷ್ಣರಾಜೇಂದ್ರ ಭಟ್‌, ರವೀಂದ್ರ ಭಟ್ ನೇತೃತ್ವದಲ್ಲಿ ನಡೆಯಲಿದೆ.

    Post Views: 227

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.