Facebook Twitter Instagram
    Friday, August 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ- ಆರೋಪಿಯ‌ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ- ಆರೋಪಿಯ‌ ಬಂಧನ

    August 28, 2026
    Share

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ.

    ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್‌ (21) ಬಂಧಿತ ಆರೋಪಿ. 2025ರ ಸೆಪ್ಟೆಂಬರ್‌ನಿಂದ ನವೆಂಬರ್‌ ಅವಧಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ.

    ಈ ಬಗ್ಗೆ ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026ರಂತೆ ಬಿಎನ್‌ಎಸ್‌ ಕಲಂ 64(2)(m), 65(1), 351(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 4(2), 6ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

    ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಶ್ರೀಕಾಂತ್‌ ಪರಾರಿಯಾಗಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್‌ಐ ಸಮರ್ಥ್ ಆರ್. ಗಾಣಿಗೇರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಆ.25ರಂದು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಆರೋಪಿಯನ್ನು ಬಂಧಿಸಿದೆ.

    ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ವೃಷಭ (418), ಮಹೇಶ್‌ (369) ಹಾಗೂ ಪೊಲೀಸ್ ಕಾನ್‌ಸ್ಟೆಬಲ್‌ ಚರಣ್ ರಾಜ್ (975) ಭಾಗವಹಿಸಿದ್ದರು.

    ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 1

    Related Posts

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ : ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ- ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್

    August 28, 2026

    ಮಂಗಳೂರು: ಲೈಸೆನ್ಸ್ ಇಲ್ಲದೆ ಬಸ್ ಚಾಲನೆ -ಚಾಲಕ, ಮಾಲಕನಿಗೆ ಜೈಲು ಶಿಕ್ಷೆ

    August 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ- ಆರೋಪಿಯ‌ ಬಂಧನ

    August 28, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ : ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ- ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್

    August 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.