Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಕೇರಳದ ಬಾಲಕನಲ್ಲಿ ಕಂಡು ಬಂದ ಅಪರೂಪದ ಖಾಯಿಲೆ
    ರಾಷ್ಟ್ರೀಯ ಸುದ್ದಿ

    ಕೇರಳದ ಬಾಲಕನಲ್ಲಿ ಕಂಡು ಬಂದ ಅಪರೂಪದ ಖಾಯಿಲೆ

    July 8, 2023
    Share

    ಆಲಪ್ಪುಝ: ಕೇರಳದ ಅಲಪ್ಪುಝ ಜಿಲ್ಲೆಯಲ್ಲಿ ಅಪರೂಪದ ಖಾಯಿಲೆಗೆ ಬಾಲಕ ಬಲಿಯಾಗಿದ್ದಾನೆ.

    ಪಾನವಳ್ಳಿ ಪಂಚಾಯತ್‌ನ 15 ವರ್ಷದ ಬಾಲಕ ಈ ಅಪರೂಪದ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್
    ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.

    ಪಾನವಳ್ಳಿ ಪೂರ್ವ ಮೈತಾರದ ಅನಿಲ್ ಕುಮಾರ್ ಮತ್ತು ಶಾಲಿನಿ ದಂಪತಿಯ ಪುತ್ರ ಗುರುದತ್ (15) ಮೃತ ದುರ್ದೈವಿ. ಈ ಬಾಲಕ 10ನೇ ತರಗತಿ ಓದುತ್ತಿದ್ದ.

    ಹೊಳೆಯಲ್ಲಿ ಸ್ನಾನ ಮಾಡಿದ ಬಳಿಕ ಬಾಲಕ ಅಸ್ವಸ್ಥಗೊಂಡಿರುವುದಾಗಿ ವರದಿಯಾಗಿದೆ. ಕೆಸರಿನ ಜಲಮೂಲಗಳಲ್ಲಿ ನೇಗ್ಲೇರಿಯಾ ಫೌಲೆರಿ ಕಂಡುಬರುತ್ತವೆ. ಮನುಷ್ಯರು ಧುಮುಕಿದಾಗ ಮೂಗಿನ ಮೂಲಕ ತಲೆಯನ್ನು ತಲುಪಿ, ಮೆದುಳಿನ ಸೋಂಕು ಉಂಟಾಗುತ್ತದೆ. ಜೊತೆಗೆ ಜೀವಕ್ಕೂ ಹಾನಿಯಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

    ಪರಾವಲಂಬಿ ಸ್ವಭಾವವಿಲ್ಲದೇ ನೀರಿನಲ್ಲಿ ಮುಕ್ತವಾಗಿ ವಾಸಿಸುವ ಅಮೀಬಾ ವರ್ಗಕ್ಕೆ ಸೇರಿದ ರೋಗಕಾರಕಗಳು ಚರಂಡಿ ಅಥವಾ ಕೊಳಕು ನೀರಿನಲ್ಲಿ ಸ್ನಾನ ಮಾಡುವುದರಿಂದ ಮೂಗಿನ ತೆಳ್ಳಗಿನ ಚರ್ಮದ ಮೂಲಕ ಮಾನವ ದೇಹವನ್ನು ಪ್ರವೇಶಿಸುವ ಈ ಜೀವಿ ಮೆದುಳು ಜ್ವರವನ್ನು ಉಂಟು ಮಾಡುತ್ತದೆ. ಇದು ಮೆದುಳಿನ ಮೇಲೆ ಗಂಭೀರವಾದ ಪರಿಣಾಮ ಬೀರುತ್ತದೆ.

    ಇದರ ಮುಖ್ಯ ಲಕ್ಷಣಗಳು ಜ್ವರ, ತಲೆನೋವು, ವಾಂತಿ ಮತ್ತು ಮೂರ್ಛೆ ರೋಗವಾಗಿದೆ. ಪ್ರಾಥಮಿಕ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (ಪಿಎಎಂ) ನೈಗ್ಲೇರಿಯಾ ಫೌಲೆರಿಯಿಂದ ಉಂಟಾಗುವ ಅಪರೂಪದ ಮೆದುಳಿನ ಸೋಂಕು.ನೇಗ್ಲೇರಿಯಾ ಫೌಲೆರಿ ಒಂದು ಅಮೀಬಾ.

    ಕಲುಷಿತ ನೀರಿಗೆ ಒಡ್ಡಿಕೊಂಡ 1 ರಿಂದ 2 ವಾರಗಳಲ್ಲಿ ರೋಗ ಲಕ್ಷಣಗಳು ಪ್ರಾರಂಭವಾಗುತ್ತವೆ. ಕೆಲವೊಮ್ಮೆ ಮೊದಲ ಲಕ್ಷಣವೆಂದರೆ ವಾಸನೆ ಅಥವಾ ರುಚಿಯಲ್ಲಿ ಬದಲಾವಣೆ. ನಂತರ, ತಲೆನೋವು, ವಾಕರಿಕೆ ಮತ್ತು ವಾಂತಿ ಅನುಭವಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ.

    Post Views: 246

    Related Posts

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಬೆಳ್ತಂಗಡಿ: ಕೇರೆ ಹಾವನ್ನು ಬೆನ್ನಟ್ಟಿ ಮನೆಯೊಳಗೆ ನುಗ್ಗಿದ ಬೃಹತ್ ಕಾಳಿಂಗ ಸರ್ಪ

    August 17, 2026

    ಕಾಸರಗೋಡು: ಒಂದೇ ಕೊಠಡಿಯಲ್ಲಿ ತಂದೆ-ಮಗಳ ಮೃತದೇಹ ಪತ್ತೆ

    August 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.