Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯಾ ಹತ್ಯೆ ಪ್ರಕರಣ: ಕುಟುಂಬಕ್ಕೆ ಮತ್ತೆ ನಿರಾಸೆ, ಮೂರು ಅರ್ಜಿ ವಜಾಗೊಳಿಸಿದ ಹೈಕೋರ್ಟ್
    ಇತ್ತೀಚಿನ ಸುದ್ದಿ

    ಸೌಜನ್ಯಾ ಹತ್ಯೆ ಪ್ರಕರಣ: ಕುಟುಂಬಕ್ಕೆ ಮತ್ತೆ ನಿರಾಸೆ, ಮೂರು ಅರ್ಜಿ ವಜಾಗೊಳಿಸಿದ ಹೈಕೋರ್ಟ್

    August 30, 2024
    Share

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನ ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ.

    ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಲಾಗಿದೆ. ಪ್ರಕರಣದಲ್ಲಿ ಸಂತೋಷ್ ರಾವ್ ಪಾತ್ರವಿಲ್ಲ ಎಂದು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಈಗ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಮರು ತನಿಖೆ ಕೋರಿ ಸೌಜನ್ಯ ಪೋಷಕರು ತಾಯಿ ಕುಸುಮಾವತಿ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೂಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರ ಜೊತೆಗೆ ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ಕೂಡ ವಜಾ ವಜಾಗೊಳಿಸಲಾಗಿದೆ.

    ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರ ಪೀಠದಿಂದ ಆದೇಶ ಹೊರಬಿದ್ದಿದೆ. ಈ ಮೂಲಕ ಮೂರೂ ಅರ್ಜಿಗಳನ್ನ ವಜಾಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

    2012ರ ಅ.9ರಂದು ಸೌಜನ್ಯಳನ್ನ ಅಪಹರಿಸಿ ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಸಂತೋಷ್‌ ರಾವ್‌ ಅನ್ನು ಬಂಧಿಸಿದ್ದರು. ನಂತರ ಪ್ರಕರಣ  ತನಿಖೆಯನ್ನು ಸಿಐಡಿ ವರ್ಗಾವಣೆ ಆಗಿತ್ತು. ಬಳಿಕ ಪ್ರಕರಣದ ತನಿಖೆ ಸಿಬಿಐಗೆ ವರ್ಗಾಯಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಸೆಷನ್ಸ್‌ ಕೋರ್ಟ್ ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ನನ್ನ ಖುಲಾಸೆಗೊಳಿಸಿತ್ತು. 2023ರ ಜೂ.16ರಂದು ಸೆಷನ್ಸ್ ಕೋರ್ಟ್ ಆದೇಶ ಮಾಡಿತ್ತು.

    Post Views: 271

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.