Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆ- ವಾಮಂಜೂರು ಪೊಲೀಸ್ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಮರುವಿಂಗಡನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆ- ವಾಮಂಜೂರು ಪೊಲೀಸ್ ಠಾಣೆಗಳ ವ್ಯಾಪ್ತಿಯ ಗ್ರಾಮಗಳ ಮರುವಿಂಗಡನೆ

    August 14, 2025
    Share

    ಮಂಗಳೂರು: ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ (ವಾಮಂಜೂರು) ಮತ್ತು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವನ್ನು ಆಗಸ್ಟ್ 15ರಿಂದ ಅನ್ವಯವಾಗುವಂತೆ ಮರು ವಿಂಗಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರು ಮತ್ತು ಅರ್ಕುಳ ಗ್ರಾಮಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮವನ್ನು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿಸಲಾಗಿದೆ.

    ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಪದವು ಗ್ರಾಮಕ್ಕೆ ಒಳಪಡುವ ಕುಲಶೇಖರ, ಸಿಲ್ವರ್ ಗೇಟ್, ಡೈರಿ ಗೇಟ್, ಕುಲಶೇಖರ ಚೌಕಿ, ಪದವಿನಂಗಡಿ, ಗುರುನಗರ, ಮೇರಿಹಿಲ್ ವೆಂಕಟರಮಣ ದೇವಸ್ಥಾನ ರಸ್ತೆ, ಕೊಪ್ಪಲಕಾಡು, ಬಾಂದೋಟ್ಟು ಯೆಯ್ಯಾಡಿ, ದಂಡಕೇರಿ, ಶಕ್ತಿನಗರ, ನೀತಿ ನಗರ, ಪೊಲೀಸ್ ಲೇನ್, ಪ್ರೀತಿನಗರ, ಸಂಜಯ ನಗರ, ಮುಗೋಡಿ, ಕಾರ್ಮಿಕ ಕಾಲನಿ, ಕೆಹೆಚ್ಬಿ. ನಾಲ್ಯಪದವು. ಗಂಧಕಾಡು, ಯೆಯ್ಯಾಡಿ ಇಂಡಸ್ಟ್ರಿಯಲ್ ಏರಿಯ, ರಾಜೀವ ನಗರ, ಮುತ್ತಪ್ಪ ಗುಡಿ, ಕಕ್ಕೆಬೆಟ್ಟು, ಮಂಜಡ್ಕ, ದತ್ತ ನಗರ, ಸಿದ್ದ ಪಡ್ಡು ಪ್ರದೇಶಗಳನ್ನು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡಿಸಲಾಗಿದೆ.

    ಅದೇರೀತಿ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರು ಮತ್ತು ಅರ್ಕುಳ ಗ್ರಾಮಕ್ಕೆ ಒಳಪಡುವ ಸ್ಥಳಗಳಾದ ಅಡ್ಯಾರ್ ಪದವು. ವಳಚ್ಚಿಲ್, ಸೋಮನಾಥ ಕಟ್ಟೆ, ಅಡ್ಯಾರ್ ಕಟ್ಟೆ, ಅರ್ಕುಳ, ಶ್ರೀನಿವಾಸ ಕಾಲೇಜು, ಸಹ್ಯಾದ್ರಿ ಕಾಲೇಜ್, ಪ್ರದೇಶಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಮರುವಿಂಗಡಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.

    ಹಾಗಾಗಿ ಆ.15ರಿಂದ ಪದವು ಗ್ರಾಮಕ್ಕೆ ಒಳಪಡುವ ಈ ಪ್ರದೇಶದ ಸಾರ್ವಜನಿಕರು ಕ್ರಿಮಿನಲ್ ಪ್ರಕರಣಗಳು, ದೂರು ಅರ್ಜಿಗಳು, ಪಾಸ್ ಪೋರ್ಟ ಅರ್ಜಿ ವಿಚಾರಣೆ, ಪಿಸಿಸಿ ವಿಚಾರಣೆ ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಇತರ ವಿಷಯಗಳ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು. ಹಾಗೂ ಅಡ್ಯಾರು ಮತ್ತು ಅರ್ಕುಳ ಗ್ರಾಮಕ್ಕೆ ಒಳಪಡುವ ಮೇಲ್ಕಂಡ ಪ್ರದೇಶದ ಸಾರ್ವಜನಿಕರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಕಮಿಷನರ್ ಪ್ರಕಟನೆಯಲ್ಲಿ ಸೂಚಿಸಿದ್ದಾರೆ.

    Post Views: 270

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.