Facebook Twitter Instagram
    Wednesday, July 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋರ್ಟ್ ಗೆ ಪದೇಪದೇ ಇ ಮೇಲ್ ಬೆದರಿಕೆ: ಭದ್ರತೆ ಬಲಪಡಿಸಲು ಹೊಸ ಕ್ರಮ- ಎಸ್‌ಪಿ ಹರಿರಾಂ ಶಂಕರ್
    ಇತ್ತೀಚಿನ ಸುದ್ದಿ

    ಕೋರ್ಟ್ ಗೆ ಪದೇಪದೇ ಇ ಮೇಲ್ ಬೆದರಿಕೆ: ಭದ್ರತೆ ಬಲಪಡಿಸಲು ಹೊಸ ಕ್ರಮ- ಎಸ್‌ಪಿ ಹರಿರಾಂ ಶಂಕರ್

    July 1, 2026
    Share

    ನ್ಯಾಯಾಲಯಗಳಿಗೆ ಪದೇಪದೇ ನಕಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಕಾರ್ಯಕ್ಕೆ ಯಾವುದೇ ಅಡ್ಡಿ ಉಂಟಾಗದಂತೆ ಹೊಸ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

    ಇನ್ನು ಮುಂದೆ ಪ್ರತಿದಿನ ಬೆಳಿಗ್ಗೆ ನ್ಯಾಯಾಲಯ ಆರಂಭವಾಗುವ ಮೊದಲು ನ್ಯಾಯಾಲಯದ ಆವರಣ ಹಾಗೂ ಕಟ್ಟಡವನ್ನು ಪೊಲೀಸರು ಸಂಪೂರ್ಣವಾಗಿ ಪರಿಶೀಲಿಸಲಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸಾಮಗ್ರಿಗಳು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕವೇ ನ್ಯಾಯಾಲಯದ ಕಾರ್ಯಾರಂಭಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು.

    ಈ ಕ್ರಮದಿಂದ ಭವಿಷ್ಯದಲ್ಲಿ ನಕಲಿ ಬೆದರಿಕೆ ಇ-ಮೇಲ್‌ಗಳು ಬಂದರೂ ನ್ಯಾಯಾಲಯದ ಕಲಾಪ ಹಾಗೂ ದೈನಂದಿನ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೊಂದಿಗೆ ನಡೆದ ಚರ್ಚೆಯ ಆಧಾರದ ಮೇಲೆ, ಲಭ್ಯವಿರುವ ಸಿಬ್ಬಂದಿ ಹಾಗೂ ಸಂಪನ್ಮೂಲಗಳನ್ನು ಪರಿಗಣಿಸಿ ತಾತ್ಕಾಲಿಕವಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಅಗತ್ಯವಿರುವ ಸ್ಥಳಗಳಲ್ಲಿ ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಿ ನ್ಯಾಯಾಲಯಗಳ ಭದ್ರತೆಯನ್ನು ಇನ್ನಷ್ಟು ಬಲಪಡಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

    ಇದೇ ವೇಳೆ, ನಕಲಿ ಬೆದರಿಕೆ ಇ-ಮೇಲ್‌ಗಳ ಮೂಲವನ್ನು ಪತ್ತೆಹಚ್ಚಲು ಇತರ ಜಿಲ್ಲೆಗಳ ಪೊಲೀಸ್ ಇಲಾಖೆ, ವಿವಿಧ ರಾಜ್ಯಗಳ ತನಿಖಾ ಸಂಸ್ಥೆಗಳು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

    Post Views: 11

    Related Posts

    ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ!

    July 1, 2026

    ಮಂಗಳೂರು: ಮನೆ ಮೇಲೆ ಕುಸಿದ ತಡೆಗೋಡೆ- ವಾರದ ಮುನ್ನವೇ ಸ್ಥಳಾಂತರಗೊಂಡು ಪ್ರಾಣಾಪಾಯದಿಂದ ಪಾರಾದ ಕುಟುಂಬ..!

    July 1, 2026

    ಮಂಗಳೂರು ದರೋಡೆ ಪ್ರಕರಣ: ಬೆಂಜನಪದವಿನಲ್ಲಿ ವಾಹನ ಪತ್ತೆ..!!

    July 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ!

    July 1, 2026

    ಮಂಗಳೂರು: ಮನೆ ಮೇಲೆ ಕುಸಿದ ತಡೆಗೋಡೆ- ವಾರದ ಮುನ್ನವೇ ಸ್ಥಳಾಂತರಗೊಂಡು ಪ್ರಾಣಾಪಾಯದಿಂದ ಪಾರಾದ ಕುಟುಂಬ..!

    July 1, 2026

    ಕೋರ್ಟ್ ಗೆ ಪದೇಪದೇ ಇ ಮೇಲ್ ಬೆದರಿಕೆ: ಭದ್ರತೆ ಬಲಪಡಿಸಲು ಹೊಸ ಕ್ರಮ- ಎಸ್‌ಪಿ ಹರಿರಾಂ ಶಂಕರ್

    July 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.