Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲೋಕಾಯುಕ್ತ ಎಂದು ರೆವಿನ್ಯೂ ಆಫೀಸರನ್ನೇ ವಂಚಿಸಲು ಹೋದ ಖದೀಮ ಅರೆಸ್ಟ್..!
    ಇತ್ತೀಚಿನ ಸುದ್ದಿ

    ಮಂಗಳೂರು: ಲೋಕಾಯುಕ್ತ ಎಂದು ರೆವಿನ್ಯೂ ಆಫೀಸರನ್ನೇ ವಂಚಿಸಲು ಹೋದ ಖದೀಮ ಅರೆಸ್ಟ್..!

    December 22, 2024
    Share

    ಮಂಗಳೂರು: ಲೋಕಾಯುಕ್ತ ಎಂದು ಸೋಮೇಶ್ವರ ಪುರಸಭೆ ರೆವಿನ್ಯೂ ಆಫೀಸರನ್ನೇ ವಂಚಿಸಲು ಹೋದ ಖದೀಮನೋರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

    ಆಂಧ್ರಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ಓ.ಡಿ.ಸಿ ಮಂಡಲ್, ವೆಂಕಟಾಪುರಂ ಪಂಚಾಯತ್, ನಲ್ಲಗುಟ್ಲಪಲ್ಲಿ ಗ್ರಾಮದ ನಿವಾಸಿ ಧನಂಜಯ ರೆಡ್ಡಿ ತೋಟ ಬಂಧಿತ ಆರೋಪಿ. 2024ರ ಎಪ್ರಿಲ್ 6ರಂದು ಸೋಮೇಶ್ವರ ಪುರಸಭೆ ರೆವಿನ್ಯೂ ಆಫೀಸರ್ ಪುರುಷೋತ್ತಮ ಅವರ ಮೊಬೈಲ್‌ಗೆ ಅಪರಿಚಿತನಿಂದ ವಾಟ್ಸ್ಆ್ಯಪ್ ಕರೆ ಬಂದಿದೆ. ಅತ್ತಕಡೆಯಿಂದ ಮಾತನಾಡಿದ ಅಪರಿಚಿತ ‘ತಾನು ಲೋಕಾಯುಕ್ತದಿಂದ ಮಾತನಾಡುತ್ತಿದ್ದೇನೆ‌. ತಮ್ಮ ಮೇಲೆ ಆರೋಪ ಬಂದಿದೆ. ನಮ್ಮ ಟೆಕ್ನಿಕಲ್ ಆಫೀಸರ್ ನಿಮ್ಮ ಆಫೀಸಿಗೆ ಬರುವ ಮೊದಲು ಅದನ್ನು ಸರಿ ಮಾಡುವುದಾದರೆ ಮಾಡುವ’ ಎಂದು, ‘ಹಣ ನೀಡುವಂತೆ’ ತಿಳಿಸಿದ್ದಾನೆ. ‘ಇಲ್ಲವಾದಲ್ಲಿ ತೊಂದರೆ ಮಾಡುವುದಾಗಿ’ ಬೆದರಿಕೆ ಹಾಕಿದ್ದಾನೆ. ಆತ ಕರೆ ಮಾಡಿರುವ ಮೊಬೈಲ್ ಸಂಖ್ಯೆಯನ್ನು ಟ್ರೂಕಾಲರ್‌ನಲ್ಲಿ ಪರೀಶೀಲಿಸಿದಾಗ ಡಿ.ಪ್ರಭಾಕರ ಲೋಕಾಯುಕ್ತ ಪಿ.ಐ ಎಂದು ಬಂದಿದೆ. ಈ ಬಗ್ಗೆ ಪುರುಷೋತ್ತಮ ಅವರು ಕರ್ನಾಟಕ ಲೋಕಾಯುಕ್ತ ಮಂಗಳೂರು ಇಲ್ಲಿನ ಅಧಿಕಾರಿಗಳಲ್ಲಿ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ಅಂತಹ ಹೆಸರಿನ ಯಾವುದೇ ಅಧಿಕಾರಿ/ಸಿಬ್ಬಂದಿ ಇರುವುದಿಲ್ಲವಾಗಿ ತಿಳಿದು ಬಂದಿದೆ. ಅಲ್ಲದೆ ಪುರುಷೋತ್ತಮ ಅವರ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಕಿ ಲಿಲ್ಲಿ ನಾಯರ್ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕ ಕೃಷ್ಣ ಆರ್. ಅವರಿಗೂ ಇದೇ ರೀತಿ ಬೆದರಿಕೆ ಒಡ್ಡಿದ್ದಾನೆ. ಆದ್ದರಿಂದ ಕರೆ ಮಾಡಿರುವ ಅಪರಿಚಿತ ಮೋಸದಿಂದ ಹಣ ಮಾಡುವ ಉದ್ದೇಶದಿಂದ ಕರ್ನಾಟಕ ಲೋಕಾಯುಕ್ತ ಎಂದು ನಟಿಸಿದ್ದಾನೆ ಎಂದು ದೂರು ದಾಖಲಿಸಲಾಗಿತ್ತು‌. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿತನು ಇದೇ ರೀತಿಯ ಕೃತ್ಯ ಎಸಗಿದ ಬಗ್ಗೆ ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪೊಲೀಸ್ ಠಾಣೆ ಹಾಗೂ ಹೈದರಾಬಾದ್‌ನ ಶಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ ತಿಳಿದು ಬಂದಿರುತ್ತದೆ.

    Post Views: 190

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.