Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಿವಾಲ್ವರ್ ತೋರಿಸಿ ಲಾರಿ ಕಿಡ್ನಾಪ್‌: ಕೆಲವೇ ಗಂಟೆಗಳಲ್ಲಿ ಪ್ರಕರಣ ಬೇಧಿಸಿದ ಮಂಜೇಶ್ವರ ಪೊಲೀಸ್‌
    ಇತ್ತೀಚಿನ ಸುದ್ದಿ

    ರಿವಾಲ್ವರ್ ತೋರಿಸಿ ಲಾರಿ ಕಿಡ್ನಾಪ್‌: ಕೆಲವೇ ಗಂಟೆಗಳಲ್ಲಿ ಪ್ರಕರಣ ಬೇಧಿಸಿದ ಮಂಜೇಶ್ವರ ಪೊಲೀಸ್‌

    February 24, 2023
    Share

    ಕಾಸರಗೋಡು: ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ಚಾಲಕರಿಗೆ ರಿವಾಲ್ವರ್ ತೋರಿಸಿ ಎರಡು ಲಾರಿಗಳನ್ನು ಅಪಹರಿಸಿದ ಘಟನೆ ಬುಧವಾರ ಕರ್ನಾಟಕ ಕೇರಳ ಗಡಿಯ ಮೀಯಪದವಿನಲ್ಲಿ ನಡೆದಿದ್ದು, ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಮಂಜೇಶ್ವರ ಪೊಲೀಸರು ಬೇಧಿಸಿ ನಾಲ್ವರನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ನಾಸಿಕ್ ನ ರಾಕೇಶ್ ಕಿಶೋರ್ (25), ಸೋಂಕಾಲಿನ ಹೈದರ್ ಅಲಿ (22), ಪೈವಳಿಕೆ ಕಳಾಯಿಯ ಸಯಾಫ್ (22), ಮೀಯಪದವು ಮುಹಮ್ಮದ್ ಸಫ್ವಾನ್ (23) ಬಂಧಿತರು. ಈ ವೇಳೆ ಮತ್ತಿಬ್ಬರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಆರಂಭವಾಗಿದೆ. ಬಂಧಿತರಿಂದ ಅಪಹರಣಗೊಂಡ ಎರಡು ಲಾರಿ, ಪಿಸ್ತೂಲ್, ನಾಲ್ಕು ಸಜೀವ ಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವಿವರ ಬುಧವಾರ ಸಂಜೆ 6 ಗಂಟೆಯ ವೇಳೆ ಮೀಯಪದವು ಬೆಜ್ಜದಲ್ಲಿ ಬರುತ್ತಿದ್ದ ಎರಡು ಲಾರಿಯನ್ನು ಪಿಸ್ತೂಲು ತೋರಿಸಿ ಅಡ್ಡಗಟ್ಟಿ ಕೆಳಗಿಳಿಸಿ ಮೊಬೈಲ್, ಹಣವನ್ನು ದೋಚಿ ಲಾರಿಗಳನ್ನು ಅಪಹರಿಸಿದ್ದರು. ಈ ಬಗ್ಗೆ ತಕ್ಷಣ ಮಾಹಿತಿ ಪಡೆದ ಮಂಜೇಶ್ವರ ಪೊಲೀಸರು ಲಾರಿಗಳನ್ನು ಬೆನ್ನಟ್ಟಿದ್ದಾಗ ಪೈವಳಿಕೆ ಕೊಮ್ಮಂಗಳ ಬಳಿ ಎರಡು ಲಾರಿಗಳನ್ನು ಬಿಟ್ಟು ಪರಾರಿಯಾಗಲೆತ್ನಿಸಿದ್ದಾರೆ. ತಕ್ಷಣ ಇಬ್ಬರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 25ಕ್ಕೂ ಅಧಿಕ ಪ್ರಕರಣಗಳಲ್ಲಿ ಶಾಮೀಲಾಗಿ ಕಾಫಾ ಕಾಯ್ದೆಯಂತೆ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಗೊಂಡಿದ್ದ ಮೀಯಪದವಿನ ಅಬ್ದುಲ್ ರಹೀಂ ನ ನೇತೃತ್ವದಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 204

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.