ಮಂಗಳೂರು:ಸ್ಕೂಟರ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮರೋಳಿಯಲ್ಲಿ ಬಳಿ ನಡೆದಿದೆ.ಸ್ಕೂಟರ್ ಸವಾರ ಮುಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡಿದ್ದಾರೆ.ಬಜ್ಪೆ ಸಮೀಪದ ಆದ್ಯಪಾಡಿಯ ಮುಹಮ್ಮದ್ ಹನೀಫ್ ತುಂಬೆಯಿಂದ ನಂತೂರು ಕಡೆಗೆ ಪತ್ನಿ ರಮ್ಲತ್ ಜೊತೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಇದರಿಂದ ಸ್ಕೂಟರ್ ಮುಂದಿನಿಂದ ಚಲಿಸುತ್ತಿದ್ದ ಇನ್ನೊಂದು ಕಾರಿಗೂ ಬಡಿದಿದೆ ಎನ್ನುವ ಮಾಹಿತಿ ಇದೆ.ತುಂಬೆಯಲ್ಲಿ ನಡೆದ ತನ್ನ ಅಣ್ಣನ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪತ್ನಿಯ ಜೊತೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)