Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿಗೆ ರಿಮಾಂಡ್ ಹೋಮ್
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ ಮಹಿಳೆ ಕೊಲೆ ಪ್ರಕರಣ: ಆರೋಪಿಗೆ ರಿಮಾಂಡ್ ಹೋಮ್

    June 20, 2024
    Share

    ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡರಾತ್ರಿ ಕುತ್ತಿಗೆ ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಅಪ್ರಾಪ್ತ ವಯಸ್ಕ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 15 ದಿನಗಳಾವಧಿಗೆ ರಿಮಾಂಡ್ ಹೋಮ್ ಗೆ ಕಳುಹಿಸಿದೆ.

    ಹೇಮಾವತಿ ಅವರ ಮನೆಯಲ್ಲಿ ಘಟನೆಯ ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ನಾಳೆ ತನ್ನ ಕೃತ್ಯವನ್ನು ನೆರೆಹೊರೆಯವರಿಗೆ ತಿಳಿಸಿದರೆ ತಾನು ಅವಮಾನಿತನಾಗುವ ಸಾಧ್ಯತೆ ಇದೆ ಎಂದು ಅಂಜಿಕೆಯಿಂದ ಈ ಬಾಲಕ ಆಕೆಯನ್ನು ಕೊಲ್ಲುವ ನಿರ್ಧಾರ ತಾಳಿದ್ದ. ಸುಮಾರು ಅರ್ಧ ಗಂಟೆಯ ಬಳಿಕ ನಿದ್ರೆಗೆ ಜಾರಿದ್ದ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಚಿಕ್ಕಮ್ಮ ಮೃತಪಟ್ಟಿರುವುದು ದೃಢವಾದೊಡನೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಾನೇ ಮೊದಲಾಗಿ ತನ್ನ ತಂದೆಗೆ ತಿಳಿಸಿ ಪಾರಾಗಲು ಯತ್ನಿಸಿದ್ದ. ಆದರೆ ಕುತ್ತಿಗೆ ಹಿಸುಕಿದ ವೇಳೆ ಆಕೆ ಪ್ರಾಣ ರಕ್ಷಣೆಗಾಗಿ ಬಾಲಕನಿಗೆ ಪರಚಿದ್ದು, ಈ ಪರಚಿದ ಗಾಯವೇ ಪೊಲೀಸರು ಸಾಕ್ಷಿಯಾಗಿತ್ತು.

    ಬಂಟ್ವಾಳ ತಾಲೂಕು ಮಾಣಿ ಗ್ರಾಮದ ವಿಠಲ ಪೈ ಯಾನೆ ಶೈಲೇಶ್ ಎಂಬವರನ್ನು ವಿವಾಹವಾಗಿದ್ದ ಹೇಮಾವತಿಯವರು ಗಂಡನ ಕುಡಿತದ ಚಟದಿಂದ ಬೇಸತ್ತು ಗಂಡನಿಂದ ದೂರವಾಗಿದ್ದರು. ಹಾಗೂ ವಿವಾಹ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣಾ ಹಂತದಲ್ಲಿತ್ತೆನ್ನಲಾಗಿದೆ. ಹೋಟೇಲೊಂದರಲ್ಲಿ ಕೆಲಸ ಮಾಡುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದ ಈಕೆ ತನ್ನ ತಾಯಿ ಮನೆಯಲ್ಲಿ ವಾಸ್ತವ್ಯವನ್ನು ಹೊಂದಿದ್ದು, ಮಗನಂತಿದ್ದ ಅಕ್ಕನ ಮಗನೇ ಮೃಗೀಯ ವರ್ತನೆ ತೋರಿ ಆಕೆಯ ಸಾವಿಗೆ ಕಾರಣವಾಗಿರುವುದು ಮಾತ್ರ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

    Post Views: 218

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.