Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಲ್ಡರ್ ಮನೆಯನ್ನೇ ಕೊಳ್ಳೆ ಹೊಡೆದ ಕಾರ್ಮಿಕ..! ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಕಳುವು
    ಇತ್ತೀಚಿನ ಸುದ್ದಿ

    ಬಿಲ್ಡರ್ ಮನೆಯನ್ನೇ ಕೊಳ್ಳೆ ಹೊಡೆದ ಕಾರ್ಮಿಕ..! ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಕಳುವು

    October 25, 2023
    Share

    ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ.

    ತಾಲೂಕಿನ ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
    ಸುಮಾರು 27,50,000 ರೂ ನಗದು ಹಾಗೂ 4,96,000 ರೂ.  ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
    ಘಟನೆ ನಡೆದಿದ್ದು ಹೇಗೆ ಮತ್ತು ಯಾವಾಗ?
    ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು 8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಆತನಿಗೆ ಫರಂಗಿಪೇಟೆ ಎಂಬಲ್ಲಿನ ಹುಡುಗಿಯ ಜೊತೆ ವಿವಾಹವಾಗಿದ್ಸು, ಮಾಲಕರ ಜೊತೆ ಹೆಚ್ಚಿನ ವಿಶ್ವಾಸ ಹೊಂದಿದ್ದ. ಈ ಕಾರಣಕ್ಕಾಗಿ ಸಹಾಯಕನಾಗಿ ದುಡಿಯುತ್ತಿದ್ದ ಆಲಿಯಲ್ಲಿ ಮನೆಗೆ ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಡುತ್ತಿದ್ದರು. ಆದರೆ ಈತನ ಮೇಲಿರಿಸಿದ್ದ ಅತೀ ವಿಶ್ವಾಸ ಮಾಲಕರಿಗೆ ಮುಳುವಾಗಿ ಪರಿಣಮಿಸಿತು.
    ಅ.18 ರಂದು ಮನೆ ಮಂದಿ ಎಲ್ಲರು ಮನೆಗೆ ಬೀಗ ಹಾಕಿ ಮಂಗಳಾದೇವಿ, ಜಪ್ಪು ನಲ್ಲಿರುವ ತಮ್ಮನ ಮನೆಗೆ ಹೋಗಿದ್ದರು.
    ಮನೆಗೆ ಬೀಗ ಹಾಕಿ ಅದರ ಕೀ ಯನ್ನು ಆಲಿಯಲ್ಲಿ ನೀಡಿದ್ದರು.
    ‌‌ ಅ ಬಳಿಕ 19 ರಂದು ಕಟ್ಟಡ ಕಾಮಗಾರಿಯ ವಿಚಾರಕ್ಕೆ ಮಾಲಕ ಮೊಹಮ್ಮದ್ ಅವರು ಈತನಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು.

    ಆದರೆ ಪೋನ್ ಸ್ವಿಚ್ ಆಫ್ ಆಗಿರುವ ವಿಚಾರವನ್ನು ಅಷ್ಟಾಗಿ ಸೀರಿಯಸ್ ಆಗಿ ತೆಗೆದುಕೊಂಡಿರದ ಮಾಲಕರು ಮರುದಿನ ಅಂದರೆ ಅ. 20 ರಂದು ಅಗತ್ಯ ಕೆಲಸವೊಂದರ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು.
    ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿಂದ ಪೋನ್ ಮಾಡಿದಾಗಲೂ ಈತನ ಮೊಬೈಲ್ ಆಫ್ ಆಗಿತ್ತು.
    ಕೆಲಸದ ಒತ್ತಡದ ನಡುವೆಯ ಅ. 23 ರಂದು ಊರಿಗೆ ವಾಪಾಸು ಆದ ಇವರು ರಾತ್ರಿ ಸುಮಾರು 8 ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಹಾಕಿಕೊಂಡಿತ್ತು. ಕೀ ಕೊಡುವಂತೆ ಆತನಿಗೆ ಪೋನ್ ಮಾಡಿದಾಗ ಆಗಲೂ ಆಫ್ ಆಗಿತ್ತು.ಸಂಶಯದಿಂದ ಮನೆಯ ಹಿಂಬದಿಯಿಂದ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿ ಇದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿತ್ತು.
    ಕೂಡಲೇ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿ , ಪೋಲೀಸ್ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ಒಳಗೆ ಹೋಗಿ‌ ನೋಡಿದಾಗ ಮೊಹಮ್ಮದ್ ಅವರು ಕಪಾಟಿನಲ್ಲಿರಿಸಲಾಗಿದ್ದ ರೂ. 25 ಲಕ್ಷ ರೂಪಾಯಿ ಹಾಗೂ ಅವರ ತಂದೆಯ ಕಪಾಟಿನಲ್ಲಿರಿಸಲಾಗಿದ್ದ ರೂ.2,50,000 ರೂ ಹಾಗೂ 4,96,000 ರೂ. ಮೌಲ್ಯದ 24 ಗ್ರಾಂ ತೂಕದ ಬ್ರಾಸ್ ಲೈಟ್, 16 ಗ್ರಾಂ ತೂಕದ ಎರಡು ಚಿನ್ನದ ಉಂಗುರ, 40 ಗ್ರಾಂ ತೂಕದ ಚಿನ್ನದ ಬಲೆಗಳು, 8 ಗ್ರಾಂ ತೂಕದ ಚಿನ್ನದ ಬೆಂಡೋಲೆ, 32 ಗ್ರಾಂ.ತೂಕದ ಚಿನ್ನದ ಮಾಲೆ, 4 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾರೆ.
    ಘಟನೆ ನಡೆದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಹಾಗೂ ಬೆರಳಚ್ಚು ತಜ್ಞರು,ಶ್ವಾನದಳದವರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

    Post Views: 215

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.