Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಸಾಲೆತ್ತೂರು ಮನೆಯಲ್ಲಿ ಚಿನ್ನಾಭರಣ ಕಳವು; ಶ್ವಾನ ನಿಗೂಢ ನಾಪತ್ತೆ
    ಇತ್ತೀಚಿನ ಸುದ್ದಿ

    ವಿಟ್ಲ: ಸಾಲೆತ್ತೂರು ಮನೆಯಲ್ಲಿ ಚಿನ್ನಾಭರಣ ಕಳವು; ಶ್ವಾನ ನಿಗೂಢ ನಾಪತ್ತೆ

    August 7, 2024
    Share

    ವಿಟ್ಲ: ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. ಜಗನ್ನಾಥ್‌ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್‌ ಹಾಗೂ ಇಬ್ಬರು ಮಕ್ಕಳು ಮಾತ್ರ ವಾಸ ಮಾಡುತ್ತಿದ್ದರು.

    ಆ.3ರಂದು ವಿಜಯ ತನ್ನ ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತಮ್ಮ ತವರು ಮನೆಗೆ ತೆರಳಿದ್ದು ಆ.4ರಂದು ವಾಪಾಸು ಹಿಂದಿರುಗಿ ಮನೆಗೆ ಬರುವ ಈ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

    ‘ಮನೆಯ ಎದುರು ಬಾಗಿಲನ ಬೀಗವನ್ನು ಯಾರೋ ಕಳ್ಳರು ಯಾವುದೋ ಸಾಧನದಿಂದ ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿದೆ. ಮನೆಯ ಒಳಗೆ ಬೆಡ್ರೂಮಿನಲ್ಲಿದ್ದ ಕಬ್ಬಿಣದ ಗೋದ್ರೇಜನ್ನು ತೆರೆದು ಅದರ ಲಾಕರನ್ನು ಕಳ್ಳರು ಯಾವುದೋ ಸಾಧನದಿಂದ ಮುರಿದು, ಅದರಲ್ಲಿದ್ದ ಒಟ್ಟು 34 ಗ್ರಾಂ ನಷ್ಟು ಚಿನ್ನ ಹಾಗು 6000/-ರೂ ನಗದು ಹಣವನ್ನು ಕಳ್ಳತನ ಮಾಡಿದ್ದಾರೆ.

    ವಿದೇಶದ ನೋಟುಗಳು ಹಾಗೂ ನಾಣ್ಯಗಳಿದ್ದ ಡಬ್ಬವನ್ನು ಕದ್ದೊಯ್ದಿದ್ದಾರೆ. ವಿಜಯ ಅವರ ಪುತ್ರಿಯ ಶಾಲಾ ಬ್ಯಾಗ್‌ನಲ್ಲಿದ್ದ ಪುಸ್ತಕವನ್ನು ಎಸೆದು ಬ್ಯಾಗನ್ನು ಕೊಂಡೊಯ್ದಿದ್ದಾರೆ. ಕಳ್ಳತನವಾದ ಸೊತ್ತುಗಳ ಒಟ್ಟು ಮೌಲ್ಯ 1,42,000/- ರೂ ಆಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 219

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.