Facebook Twitter Instagram
    Thursday, August 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026
    Share

    ಬಂಟ್ವಾಳ : ಮಣಿಹಳ್ಳ-ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬ ನಿರ್ಜನ ಪ್ರದೇಶದಲ್ಲಿ ಗುರುವಾರ (ಆಗಸ್ಟ್ 20) ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ತಲವಾರು ತೋರಿಸಿ ಬೆದರಿಸಿ ಲಕ್ಷಾಂತರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರೇ ದರೋಡೆಗೊಳಗಾದ ಬೈಕ್ ಸವಾರ.

    ವಿವಿಧ ಅಂಗಡಿಗಳಿಗೆ ಹೋಲ್‌ಸೇಲ್ ಆಧಾರದಲ್ಲಿ ಪೂರೈಸಿದ್ದ ಸಿಮೆಂಟ್ ವ್ಯಾಪಾರದ ನಗದು ಹಣವನ್ನು ವಸೂಲಿ ಮಾಡಿಕೊಂಡು ಮಯ್ಯದಿ ಅವರು ಬೈಕ್‌ನಲ್ಲಿ ಹಿಂದಿರುಗುತ್ತಿದ್ದರು. ಮುಲ್ಕಾಜೆಮಾಡದ ನಿರ್ಜನ ರಸ್ತೆಯಲ್ಲಿ ಬರುತ್ತಿದ್ದಂತೆ, ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದ ನಾಲ್ವರು ಅಪರಿಚಿತ ಖದೀಮರು ಬೈಕ್ ಅಡ್ಡಗಟ್ಟಿದ್ದಾರೆ. ಬಳಿಕ ತಲವಾರು ಬೀಸಿ ಪ್ರಾಣ ಬೆದರಿಕೆಯೊಡ್ಡಿ, ಅವರ ಬ್ಯಾಗ್‌ನಲ್ಲಿದ್ದ ಸುಮಾರು ₹8 ಲಕ್ಷಕ್ಕೂ ಅಧಿಕ ನಗದನ್ನು ಕಸಿದುಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

    ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಹಾಗೂ ಎಸ್‌ಐ ಮಂಜುನಾಥ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಜಾಲ ಬೀಸಿದ್ದು, ದೋಚಲಾದ ನಿಖರ ಮೊತ್ತ ಹಾಗೂ ಕೃತ್ಯದ ಹಿನ್ನೆಲೆಯ ಬಗ್ಗೆ ತೀವ್ರ ತನಿಖೆ ಕೈಗೊಂಡಿದ್ದಾರೆ.

    Post Views: 1

    dakshina kannada PoliceInvestigation

    Related Posts

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026

    ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ – ಸಮಯಪ್ರಜ್ಞೆಯಿಂದ 7 ಪ್ರಯಾಣಿಕರು ಪಾರು

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026

    ಮುಖವಾಡ ಧರಿಸಿ ಮನೆಗೆ ಬಂದ ವಿದ್ಯಾರ್ಥಿಗಳು: ಪ್ರಾಂಶುಪಾಲೆ ಹತ್ಯೆ ಪ್ರಕರಣ ಬಯಲು

    August 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.