Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಹುಕೋಟಿ ವಂಚಕ ರೋಶನ್ ಸಲ್ಡಾನ ಪ್ರಕರಣ : ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ
    ಇತ್ತೀಚಿನ ಸುದ್ದಿ

    ಬಹುಕೋಟಿ ವಂಚಕ ರೋಶನ್ ಸಲ್ಡಾನ ಪ್ರಕರಣ : ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

    July 28, 2025
    Share

    ಮಂಗಳೂರು: ಸುಮಾರು 200 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ಡಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ರಿಲೀಫ್ ನೀಡಿದೆ.

    ಬಿಹಾರದ ಉದ್ಯಮಿಗೆ ಹತ್ತು ಕೋಟಿ ರೂ ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದುವರೆ ಕೋಟಿ ರೂ ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

    ಇತ್ತೀಚೆಗೆ ಸಾಲ ನೀಡುವ ನೆಪದಲ್ಲಿ ಭಾರೀ ವಂಚನೆ ನಡೆಸಿದ ಜಾಲದಲ್ಲಿ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ರೋಶನ್ ಸಲ್ಡಾನ ಎಂಬಾತನನ್ನು ಸಿಎನ್ ಪೊಲೀಸರ್ ಬಂಧಿಸಿದ್ದರು. ಆತನ ಬಂಧನ ವಿಚಾರ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಹಲವಾರು ಉದ್ಯಮಿಗಳು ತಮಗೆ ವಂಚನೆ ನಡೆಸಿರುವ ಬಗ್ಗೆ ದೂರು ನೀಡಲು ಮುಂದೆ ಬಂದಿದ್ದರು.

    ಬಿಹಾರ ಮೂಲದ ಉದ್ಯಮಿ ತನ್ನಿಂದ ಹತ್ತು ಕೋಟಿ ರೂ ವಂಚನೆ ಎಸಗಿದ್ದಾನೆಂದು ದೂರು ನೀಡಿದ್ದರು. ಅಸ್ಸಾಂ ಮತ್ತು ಮಹಾರಾಷ್ಟ್ರ ಮೂಲದ ವ್ಯಕ್ತಿಗಳೂ ಕೋಟಿ ರೂ ನಂತೆ ವಂಚನೆ ಎಸಗಿದ್ದಾಗಿ ದೂರು ನೀಡಿದ್ದರು. ಅದಕ್ಕೂ ಮೊದಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಒಂದೂವರೆ ಕೋಟಿ ರೂ ವಂಚಿಸಿದ್ದ ಬಗ್ಗೆ ದೂರು ನೀಡಿದ್ದರು.

    ಮಂಗಳೂರಿನಲ್ಲಿ ದಾಖಲಾದ ಎರಡು ದೂರನ್ನು ಆಧರಿಸಿ ಪೊಲೀಸರು ಆರೋಪಿ ರೋಶನ್ ಸಲ್ಡಾನ ವಿರುದ್ದ ಕಾರ್ಯಾಚರಣೆ ನಡೆಸಿ ಆತನ ಮನೆಯಲ್ಲೇ ಬಂಧಿಸಿದ್ದರು. ಬಂಧನ ಸಂದರ್ಭದಲ್ಲಿ ತನ್ನ ಮನೆಯ ಐಶಾರಾಮಿಯಾಗಿ ತೋರಿಸುತ್ತಿದ್ದುದು, ಮನೆಯ ಒಳಗಡೆಯೇ ವಿದೇಶಿ ಮದ್ಯವನ್ನೊಳಗೊಂಡ ಬಾರ್ ಆಂಡ್ ರೆಸ್ಟೋರೆಂಟ್ ರೀತಿ ಮಾಡಿರುವುದು ಪತ್ತೆಯಾಗಿತ್ತು. ಮಂಗಳೂರಿನ ಸಿಜೆಎಂ ಕೋರ್ಟಿನಲ್ಲಿ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದರೂ ಬೆನ್ನು ಬೆನ್ನಿಗೆ ದೂರು ದಾಖಲಾಗಿದ್ದರಿಂದ ಜಾಮೀನು ಸಿಕ್ಕಿರಲಿಲ್ಲ. ಈ ನಡುವೆ ಹೈಕೋರ್ಟ್ ಮೂಲಕ ಎರಡು ಪ್ರಕರಣಗಳಿಗೆ ತಡೆಯಾಜ್ಞೆ ತರಲಾಗಿದೆ. ಮಂಗಳೂರಿನಲ್ಲಿ ರೋಶನ್ ಸಲ್ಡಾನ ಪರವಾಗಿ ಹಿರಿಯ ಕ್ರಿಮಿನಲ್ ವಕೀಲ ಅರುಣ್ ಬಂಗೇರ ವಕಾಲತ್ತು ನಡೆಸುತ್ತಿದ್ದಾರೆ.

    ಸದ್ಯಕ್ಕೆ ಆರೋಪಿ ರೋಶನ್ ಸಲ್ಡಾನ ಪೊಲೀಸರ ಕಸ್ಟಡಿಯಲ್ಲಿದ್ದು, ಎರಡು ಪ್ರಕರಣದಲ್ಲಿ ತಡೆಯಾಗಿದ್ದರಿಂದ ಸೋಮವಾರ ಕೋರ್ಟಿಗೆ ಹಾಜರುಪಡಿಸುವ ಸಂದರ್ಭದಲ್ಲಿ ಬಂಧನಕ್ಕೆ ತಡೆ ನೀಡಿ ಜಾಮೀನು ನೀಡುವಂತೆ ವಕೀಲರು ಕೇಳಿಕೊಳ್ಳುವ ಸಾಧ್ಯತೆಯಿದೆ. ಎರಡು ಪ್ರಕರಣದಲ್ಲಿ ತಡೆ ಆಗಿದ್ದರೂ ಉಳಿದ ಪ್ರಕರಣಗಳಲ್ಲಿ ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರೋಶನ್ ವಿರುದ್ದ ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯ ಉದ್ಯಮಿಗಳೂ ಪ್ರಕರಣ ದಾಖಲಿಸಿರುವುದರಿಂದ ಹೆಚ್ಚುವರಿ ಕೇಸನ್ನು ದಾಖಲಿಸುವುದಕ್ಕೂ ಅವಕಾಶವಿದ್ದು ಪೊಲೀಸರು ಆರೋಪಿಗೆ ಜಾಮೀನು ಸಿಗದಂತೆ ಮಾಡಲು ತಯಾರಿ ನಡೆಸಿದ್ದಾರೆ.

    Post Views: 248

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.