Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಮಂಗಳೂರು: ಹಿರಿಯ ರಂಗನಿರ್ದೇಶಕ ‘ಗುಡ್ಡದ ಭೂತ’ದ ಸೃಷ್ಟಿಕರ್ತ ಸದಾನಂದ ಸುವರ್ಣ ನಿಧನ
    ಇತ್ತೀಚಿನ ಸುದ್ದಿ

     ಮಂಗಳೂರು: ಹಿರಿಯ ರಂಗನಿರ್ದೇಶಕ ‘ಗುಡ್ಡದ ಭೂತ’ದ ಸೃಷ್ಟಿಕರ್ತ ಸದಾನಂದ ಸುವರ್ಣ ನಿಧನ

    July 16, 2024
    Share

    ಮಂಗಳೂರು: ಹಿರಿಯ ರಂಗನಿರ್ದೇಶಕ ಹಾಗೂ ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಮಧ್ಯಾಹ್ನ 1ರಿಂದ 3ರವರೆಗೆ ಪುರಭವನದಲ್ಲಿ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರ ಬಯಕೆಯಂತೆ ದೇಹದಾನವನ್ನು ಮಾಡಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಕನ್ನಡದಲ್ಲಿ ಅತ್ಯಂತ ಯಶಸ್ವಿ ರಂಗಭೂಮಿ ನಿರ್ದೇಶಕರಾಗಿ ನೂರಾರು ನಾಟಕಗಳನ್ನು ನಿರ್ದೇಶಿಸಿದ ಇವರು ಕೋರ್ಟ್‌ಮಾರ್ಷಲ್, ಉರುಳು, ಮಳೆನಿಲ್ಲುವವರೆಗೆ, ಗುಡ್ಡದ ಭೂತ, ಸುಳಿ ಮುಂತಾದವು ಪ್ರಯೋಗಾತ್ಮಕ, ಸದಭಿರುಚಿಯ ನಾಟಕಗಳು. ಸದಾನಂದ ಸುವರ್ಣ ಅವರು ಗಿರೀಶ್ ಕಾಸರವಳ್ಳಿಯವರ ಘಟಶ್ರಾದ್ಧ ಸಿನಿಮಾಕ್ಕೆ ನಿರ್ಮಾಪಕರಾಗುವ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. ಈ ಸಿನಿಮಾಕ್ಕೆ ಅತ್ಯುತ್ತಮ ಸಿನಿಮಾವೆಂದು ಸ್ವರ್ಣಕಮಲ ಪ್ರಶಸ್ತಿ ಲಭಿಸಿತ್ತು. ಬಳಿಕ ಕಾಸರವಳ್ಳಿಯವರ ತಬರನ ಕತೆ, ಮನೆ, ಕ್ರೌರ‌್ಯ ಮುಂತಾದ ಸಿನಿಮಾಗಳಿಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಅನುವಭವ ಪಡೆದವರು. ಬಳಿಕ ಕುಬಿ ಮತ್ತು ಇಯಾಲ ಎಂಬ ಸದಭಿರುಚಿಯ ಚಿತ್ರ ನಿರ್ದೇಶಿಸಿ ಉತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು. ಈ ಸಿನಿಮಾಕ್ಕೆ ನಾಲ್ಕು ಪ್ರಶಸ್ತಿ ಬಂದಿತ್ತು. ಬಳಿಕ ಇವರು ನಿರ್ದೇಶಿಸಿದ ಗುಡ್ಡದ ಭೂತ ಟೆಲಿಚಿತ್ರ ಜನಮನ್ನಣೆ ಗಳಿಸಿದ್ದು ಮಾತ್ರವಲ್ಲದೆ ಉತ್ತಮ ಧಾರಾವಾಹಿ ಪ್ರಶಸ್ತಿಯನ್ನು ಪಡೆದಿತ್ತು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯವರಾದ ಸದಾನಂದ ಸುವರ್ಣ ಮುಂಬಯಿಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದವರು. ಅಲ್ಲಿ ರಾತ್ರಿಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ 5ವರ್ಷ ಕೆಲಸ ಮಾಡಿ, 3 ದಶಕಗಳ ಕಾಲ ಬಣ್ಣದ ವ್ಯಾಪಾರಿಯಾಗಿದ್ದರು. ಬಳಿಕ ನಾಟಕ ರಚನೆ, ನಟನೆ, ನಿರ್ದೇಶನದಲ್ಲಿ ಐದು ದಶಕಗಳ ಕಾಲ ಶ್ರಮಿಸಿದ ಅವರು ಮುಂಬೈ ತೊರೆದು ಮಂಗಳೂರಿನಲ್ಲಿ ನೆಲೆಸಿದ್ದರು.

    Post Views: 217

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.