Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
    ಇತ್ತೀಚಿನ ಸುದ್ದಿ

    ಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

    September 4, 2024
    Share

    ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

    ಸುರಕ್ಷತಾ ಕ್ರಮಗಳು

    * ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.

    * ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.

    * ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.

    * ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.

    * ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು. •ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.

    * ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು. ಸಂಪರ್ಕ ಮಾಹಿತಿ

    * ತಾತ್ಕಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.

    * ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.

    * ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.

    * ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.

    Post Views: 298

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.