Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಪ್ರಮುಖ 13 ಕಡೆಗಳಲ್ಲಿ ಈ ಬಾರಿ “ಹಸಿರು ಪಟಾಕಿ ಮಾರಾಟ ಕೇಂದ್ರಗಳ ಸ್ಥಾಪನೆ.”
    ಇತ್ತೀಚಿನ ಸುದ್ದಿ

    ಮಂಗಳೂರಿನ ಪ್ರಮುಖ 13 ಕಡೆಗಳಲ್ಲಿ ಈ ಬಾರಿ “ಹಸಿರು ಪಟಾಕಿ ಮಾರಾಟ ಕೇಂದ್ರಗಳ ಸ್ಥಾಪನೆ.”

    October 25, 2024
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಟಾಕಿ ಮಾರಾಟಗಾರರ ಸಂಘ ಮಂಗಳೂರು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಕೇಂದ್ರಗಳನ್ನು ಈ ಬಾರಿ ತೆರೆಯಲಾಗುವುದು ಎಂದು ಇಂದು ಬೆಳಗ್ಗೆ ಮಂಗಳೂರಿನಲ್ಲಿ ಸಂಘದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ.

    ಈಗಾಗಲೇ ತಾತ್ಕಾಲಿಕ ಪಟಾಕಿ ಮಾರುವವರು ತುಂಬಾ ಸಂಕಷ್ಟದಲ್ಲಿದ್ದು, ಈ ಸಲದ ಪಟಾಕಿ ಮಾರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಘದ ಮನವಿಗೆ ಸೂಕ್ತವಾಗಿ ಸ್ಪಂಧಿಸಿ 13 ಮೈದಾನಗಳನ್ನು ಗುರುತಿಸಿದ್ದಾರೆ. ಅದರಲ್ಲಿ (1) ನೆಹರೂ ಮೈದಾನ, (2) ಎ.ಪಿ.ಎಮ್.ಸಿ ಬೈಕಂಪಾಡಿ, (3) ಉರ್ವ ಕ್ರಿಕೆಟ್ ಮೈದಾನ, (4) ಕೃಷ್ಣಾಪುರ ಪ್ಯಾರಡೈಸ್ ಮೈದಾನ, (5) ಕದ್ರಿ ಕ್ರಿಕೆಟ್ ಮೈದಾನ, (6) ಅತ್ತಾವರ ನಾಯಕ್ ಮೈದಾನ, (7) ಪದವು ಹೈಸ್ಕೂಲ್ ಮೈದಾನ, (8) ಬೋಂದೆಲ್ ಕ್ರಿಕೆಟ್ ಮೈದಾನ, (9) ಪಂಪುವೆಲ್ ಬಸ್ ಸ್ಟಾಂಡಿಗೆ ನಿಗದಿಪಡಿಸಿದ ಜಾಗ, (10) ಶಕ್ತಿನಗರ ಮೈದಾನ, (11) ಪಚ್ಚನಾಡಿ ಮೈದಾನ, (12) ಎಮ್ಮೆಕೆರೆ ಮೈದಾನ (13), ಆದರ್ಶ ಯುವಕ ಮಂಡಲ ಮೈದಾನ ಗಣೇಶಪುರ ಎಂಬ ಈ ಮೇಲಿನ ಎಲ್ಲಾ ಮೈದಾನಗಳಲ್ಲಿ ಈ ಸಲ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶವನ್ನು ಕಲ್ಪಿಸಿದ್ದು, ಈ ಎಲ್ಲಾ ಮೈದಾನಗಳಲ್ಲಿ ಪಟಾಕಿ ಸ್ವಾಲುಗಳಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಂಘಟನೆಯ ನೇತೃತ್ವದ ಪಟಾಕಿ ಮಾರಾಟಗಾರರನ್ನು ಬೆಂಬಲಿಸಬೇಕಾಗಿ ವಿನಂತಿಸಿದ್ದಾರೆ. ಕಳೆದ ವರ್ಷದಲ್ಲಿ ನಡೆದ ಕೆಲವು ಗೊಂದಲಗಳಿಗೆ ತೆರೆ ಎಳೆದು ಈ ಬಾರಿ ಸಂಘಟನೆಯ ಕರೆಗೆ ಸೂಕ್ತವಾಗಿ ಸ್ಪಂದಿಸಿದ ದ.ಕ. ಜಿಲ್ಲಾಧಿಕಾರಿಯವರಿಗೆ, ಅಗ್ನಿಶಾಮಕ ದಳದ ಅಧಿಕಾರಿ ಹಾಗೂ ಸಿಬಂದಿ ವರ್ಗಕ್ಕೆ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಮತ್ತು ಸಿಬಂದಿ ವರ್ಗಕ್ಕೆ, ಪೊಲೀಸ್ ಕಮೀಷನರ್ ಮತ್ತು ಸಿಬಂದಿ ವರ್ಗಕ್ಕೆ, ಶಾಸಕರಾದ ವೇದವ್ಯಾಸ ಕಾಮತ್, ಡಾ॥ ಭರತ್ ಶೆಟ್ಟಿ ವೈ. ಸ್ಪೀಕರ್ ಯು.ಟಿ. ಖಾದರ್, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ಮತ್ತು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ, ತುಂಬಾ ತಾಳ್ಮೆಯಿಂದ ಕಾದ ಸಂಘದ ಸದಸ್ಯರಿಗೂ ಧನ್ಯವಾದಗಳನ್ನು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ. ಈ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಅಧ್ಯಕ್ಷರಾದ ಆಲ್ವಿನ್ ಪಿಂಟೋ, ಉಪಾಧ್ಯಕ್ಷರಾದ ಮಧುಸೂದನ ಉರ್ವಸ್ಟೋರ್, ಕಾರ್ಯದರ್ಶಿಗಳಾದ ಪ್ರಕಾಶ್ ಎಂ, ರಾಘವೇಂದ್ರ ಮೊದಲಾದವರು ಮಾಹಿತಿ ನೀಡಿದರು.

    Post Views: 232

    Related Posts

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.