Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“SCDCC ಬ್ಯಾಂಕ್ ಗ್ರಾಹಕ ಸ್ನೇಹಿಯಾಗಿ ಇತರ ಬ್ಯಾಂಕ್ ಗಳಿಗೆ ಮಾದರಿ”- ಸಹಕಾರಿ ಸಚಿವ ಕೆ.ಎನ್. ರಾಜಣ್ಣ
    ಇತ್ತೀಚಿನ ಸುದ್ದಿ

    “SCDCC ಬ್ಯಾಂಕ್ ಗ್ರಾಹಕ ಸ್ನೇಹಿಯಾಗಿ ಇತರ ಬ್ಯಾಂಕ್ ಗಳಿಗೆ ಮಾದರಿ”- ಸಹಕಾರಿ ಸಚಿವ ಕೆ.ಎನ್. ರಾಜಣ್ಣ

    November 17, 2023
    Share

    ಮಂಗಳೂರು: ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಜಿಲ್ಲೆಗೆ ಮೊದಲ ಬಾರಿ ಆಗಮಿಸಿದ್ದಾರೆ. ಸಹಕಾರಿ ಇಲಾಖೆಯ ಆಳ ಅಗಲವನ್ನು ಬಲ್ಲ ಇವರು ಸಚಿವರಾಗಿರುವುದು ನಮ್ಮೆಲ್ಲರ ಪುಣ್ಯ” ಎಂದು ಎಸ್ ಸಿಡಿಸಿಸಿ ಬ್ಯಾಂಕ್ (SCDCC bank) ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

    ಬಳಿಕ ಮಾತಾಡಿದ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು, “ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ತತ್ವಗಳ ಸರಿಯಾದ ಪಾಲನೆಯಾಗುತ್ತಿದೆ. ಸಹಕಾರಿ ಆಂದೋಲನದ ಬೇಡಿಕೆ ಈಡೇರಿಸುವುದು ನಮ್ಮ ಮುಖ್ಯ ಜವಾಬ್ದಾರಿಯಾಗಿದೆ. ಇದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ರೈತರಿಗೆ ಸಾಲ ನೀಡಿಕೆಯಲ್ಲಿ ಬ್ಯಾಂಕ್ ಗಳಿಗೆ ಹೆಚ್ಚಿನ ಲಾಭ ಇರದಿದ್ದರೂ ವ್ಯವಸಾಯೇತರ ಸಾಲ ನೀಡಿಕೆಯಲ್ಲಿ ಅದನ್ನು ಸರಿದೂಗಿಸುವ ಕೆಲಸವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಮಾಡುತ್ತಿದೆ. ಈ ಮೂಲಕ ಇತರ ಬ್ಯಾಂಕ್ ಗಳಿಗೆ ಮಾದರಿಯಾಗಿದೆ. ಬ್ಯಾಂಕ್ ಅಧ್ಯಕ್ಷರಿಂದ ಹಿಡಿದು ಸಿಬ್ಬಂದಿಯವರೆಗೆ ಎಲ್ಲರೂ ಗ್ರಾಹಕರ ಹಿತಚಿಂತನೆಯನ್ನು ಕಾಯುತ್ತಿರುವುದು ಖುಷಿಯ ವಿಚಾರ”ಎಂದರು.
    “ನಮ್ಮೆಲ್ಲರ ಸಹಕಾರಿಗಳ ಉದ್ದೇಶ ಏನೆಂದರೆ ಸಹಕಾರಿ ಆಂದೋಲನದಿಂದ ಪ್ರಯೋಜನ ಪಡೆದು ಹಳ್ಳಿಗಾಡುಗಳ ಜನರೂ ಕೂಡ ಮುಂದೆ ಬರಬೇಕು. ಬ್ಯಾಂಕ್ ಸೇವೆಗಳನ್ನು ಪಡೆಯಬೇಕು. ಇದು ಜನರ ಆಂದೋಲನವಾಗಿದ್ದು ಯುವಕರು ಮಹಿಳೆಯರು ಭಾಗಿಯಾಗಬೇಕು ಎನ್ನುವ ಆಶಯ ನಮ್ಮದು” ಎಂದರು.
    “ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ 10 ವರ್ಷಗಳ ಹಿಂದೆ ವೈದ್ಯನಾಥನ್ ವರದಿಯಲ್ಲಿದ್ದ ನ್ಯೂನ್ಯತೆಯನ್ನು ಸರಿಪಡಿಸಿಕೊಳ್ಳುವುದು, ಏಕಾಏಕಿ ಕೆಲಸದಿಂದ ಕೈ ಬಿಡದಂತೆ ದೂರು ಬಂದಲ್ಲಿ ಸರಿತಪ್ಪು ಆಲೋಚಿಸಿ ಕಾರ್ಯ ಪ್ರವೃತ್ತರಾಗಲು ಕಮಿಟಿ ರೂಪಿಸುವ ಮೂಲಕ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್ ಸಿಇಓ ಗೋಪಿನಾಥ್ ಭಟ್, ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    Post Views: 164

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.