Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿರೂರು ಗುಡ್ಡ ಕುಸಿತ : ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ!ಎಂಟಕ್ಕೆರಿದ ಮೃತರ ಸಂಖ್ಯೆ
    ಇತ್ತೀಚಿನ ಸುದ್ದಿ

    ಶಿರೂರು ಗುಡ್ಡ ಕುಸಿತ : ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ!ಎಂಟಕ್ಕೆರಿದ ಮೃತರ ಸಂಖ್ಯೆ

    July 23, 2024
    Share

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ಜೊತೆಗೆ ಯೋಧರ ನೆರವು ಪಡೆದಿದೆ.

    ಒಂದೆಡೆ ಬಿಟ್ಟು ಬಿಡದ ಮಳೆ, ಮತ್ತೊಂದೆಡೆ ಪದೇ ಪದೇ ನೆಲಕ್ಕುರುಳುತ್ತಿರುವ ಗುಡ್ಡದ ಮಣ್ಣು. ಇದರ ನಡುವೆ ಜೀವ ಪಣಕ್ಕಿಟ್ಟು ಕಾರ್ಯಾಚರಣೆ ಮಾಡುತ್ತಿದೆ ರಕ್ಷಣಾ ತಂಡ. ಈಗ ಸಣ್ಣಿ ಹನುಮಂತ ಗೌಡ (67) ಮಹಿಳೆ ಶವ ಸಿಕ್ಕಿದೆ. ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಇನ್ನೂ ಮೂವರಿಗೆ ಶೋಧ ಕಾರ್ಯ ಮುಂದುವರಿದಿದೆ.

    ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಉಳವರೆ ಗ್ರಾಮದ ಸಣ್ಣಿ ಹನುಮಂತಗೌಡ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್‌ಗಳು ಮಾತ್ರ ಪತ್ತೆಯಾಗಿಲ್ಲ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಆರ್ಮಿ ಕಮಾಂಡೋಗಳ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.

    ಗುಡ್ಡದ ಮಣ್ಣು ತೆರವಿಗೆ ಅಬ್ಬರದ ಅಡ್ಡಿ ಉಂಟು ಮಾಡಿದರೆ, ಮಳೆಯಿಂದ ಗುಡ್ಡದ ಭಾಗದಿಂದ ಬರುತ್ತಿರುವ ನೀರು ದೊಡ್ಡ ಕಂದಕವನ್ನೇ ಸೃಷ್ಟಿ ಮಾಡಿದೆ. ಇದರ ಜೊತೆಗೆ ಈ ಭಾಗದ ಮಣ್ಣನ್ನು ಪರೀಕ್ಷೆ ಮಾಡಿದ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಭೂ ವಿಜ್ಞಾನಿಗಳ ತಂಡ ಮತ್ತೆ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ವರದಿ ನೀಡಿದೆ. ಹೀಗಾಗಿ ಕಾರ್ಯಾಚರಣೆ ಮಾಡುವುದು ಸಹ ದೊಡ್ಡ ತೊಡಕಾಗಿದ್ದು, ಸಾರ್ವಜನಿಕರಿಗೆ ಮಣ್ಣು ತೆರವಾದ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

    ಜುಲೈ 16ರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಯಿತು. ಈ ದುರಂತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಅವರಲ್ಲಿ ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

    Post Views: 212

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.