Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING: ಚಂದ್ರಯಾನ-3 ಇಳಿದ ಸ್ಥಳವನ್ನು ‘ಶಿವಶಕ್ತಿ’ ಎಂದು ಕರೆಯಲಾಗುವುದು- ಪ್ರಧಾನಿ ಮೋದಿ ಘೋಷಣೆ
    ಇತ್ತೀಚಿನ ಸುದ್ದಿ

    BREAKING: ಚಂದ್ರಯಾನ-3 ಇಳಿದ ಸ್ಥಳವನ್ನು ‘ಶಿವಶಕ್ತಿ’ ಎಂದು ಕರೆಯಲಾಗುವುದು- ಪ್ರಧಾನಿ ಮೋದಿ ಘೋಷಣೆ

    August 26, 2023
    Share

    ಬೆಂಗಳೂರು: ಚಂದ್ರಯಾನ-3ಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದಂತ ಸ್ಥಳವನ್ನು ಶಿವಶಕ್ತಿ ಎಂಬುದಾಗಿ ಕರೆಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ.

    ಇಂದು ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋ ಕಮಾಂಡಿಂಗ್ ಸೆಂಟರ್ ಗೆ ಭೇಟಿ ನೀಡಿದ ಬಳಿಕ, ವಿಜ್ಞಾನಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿದಂತ ಅವರು, ನಿಮ್ಮನ್ನು ಭೇಟಿಯಾಗಿದ್ದು ತುಂಬಾ ಸಂತೋಷ ತಂದಿದೆ.

    ಇಸ್ರೋ ವಿಜ್ಞಾನಿಗಳ ಸಾಧನೆ ಇಡೀ ವಿಶ್ವವೇ ಕೊಂಡಾಡಿದೆ. ವಿಜ್ಞಾನಿಗಳ ಸಾಧನೆ ನೆನೆದು ಪ್ರಧಾನಿ ಭಾವುಕರಾಗಿ ನುಡಿದರು.

    ನಿಮ್ಮ ಧೈರ್ಯ, ಶಕ್ತಿ, ಸಾಮರ್ಥ್ಯಗಳಿಗೆ ನನ್ನ ನಮನಗಳು. ದೇಶದ ಘನತೆಯನ್ನು ಉತ್ತುಂಗಕ್ಕೆ ಏರಿಸಿದ್ದಕ್ಕೆ ಧನ್ಯವಾದಗಳು ಎಂದರು.

    ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ಪ್ರತಿಯೊಬ್ಬ ವಿಜ್ಞಾನಿಗೂ ನನ್ನದೊಂದು ಸಲ್ಯೂಟ್. ಸದ್ಯ ಭಾರತ ಚಂದ್ರನ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

    ಭಾರತದ ವೈಜ್ಞಾನಿಕ ಸಾಧನೆಯನ್ನು ವಿಶ್ವವೇ ಕೊಂಡಾಡುತ್ತಿದೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನನ್ನ ತನು, ಮನ ಸಂತೋಷದಿಂದ ಕೂಡಿದೆ. ಸಮರ್ಪಣಾ ಮನೋಭಾವ, ಕಠಿಣ ಪರಿಶ್ರಮಕ್ಕೆ ನನ್ನ ಸೆಲ್ಯೂಟ್ ಎಂಬುದಾಗಿ ತಿಳಿಸಿದರು.

    ಯಾವ ದಶವೂ ಮಾಡಿರದ ಸಾಧನೆ ನಾವು ಮಾಡಿದ್ದೇವೆ. ದೊಡ್ಡ ಅಗ್ನಿ ಪರೀಕ್ಷೆಯಲ್ಲಿ ನಾವು ಪಾಸ್ ಆಗಿದ್ದೇವೆ. ಚಂದ್ರನ ಅಂಗಳದಲ್ಲಿ ಪ್ರಜ್ಞಾನ್ ಪರಾಕ್ರಮ ಮಾಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿಯಾಗಿದೆ ಎಂದು ಹೇಳಿದರು.

    ನೀವೆಲ್ಲರೂ ಸೇರಿ ಭಾರತದ ಕನಸು ನನಸು ಮಾಡಿದ್ದೀರಿ. ನಿಮ್ಮ ಸಾಧನೆ ಎಷ್ಟೇ ಕೊಂಡಾಡಿದರೂ ಅದು ಕಡಿಮೆ. ಭಾರತದ ವಿಜ್ಞಾನದ ಶಕ್ತಿ ಇಡೀ ವಿಶ್ವಕ್ಕೆ ಮಾದರಿ. ವಿಕ್ರಮ್ ಲ್ಯಾಂಡರ್ ಮೂಲಕ ಇತಿಹಾಸ ಸೃಷ್ಠಿಸಲಾಗಿದೆ ಎಂದು ತಿಳಿಸಿದರು.

    ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ದೇಶದ ಘನತೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ತಿದ್ದೀರಿ ಎಂಬುದಾಗಿ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ ಸಲ್ಲಿಸಿದರು.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.