Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    Share

    ಬಂಟ್ವಾಳ : ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 22 ಜುಲೈ 2026 ರಂದು ಸಂಭವಿಸಿದ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ (UDR) ಸಂಖ್ಯೆ 35/2026 ಕಲಂ 194 ಬಿಎನ್‌ಎಸ್‌ (BNS) ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿತ್ತು
    ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ (RTO) ಸದರಿ ಶಾಲಾ ವಾಹನದ ದಾಖಲೆ ಪತ್ರಗಳ ಮಾನ್ಯತೆಯ ಕುರಿತು ಅಧಿಕೃತ ವರದಿ ಪಡೆದಿದ್ದಾರೆ. ಈ ವೇಳೆ, ಘಟನೆ ಸಂಭವಿಸಿದ ಸಮಯದಲ್ಲಿ ವಾಹನದ ವಿಮಾ ಪತ್ರ (Insurance) ಹಾಗೂ ಅರ್ಹತಾ ಪತ್ರ (Fitness Certificate – FC) ಎರಡೂ ಚಾಲ್ತಿಯಲ್ಲಿರಲಿಲ್ಲ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ.

    ಅಷ್ಟೇ ಅಲ್ಲದೆ, ಸದ್ರಿ ಶಾಲಾ ವಾಹನವನ್ನು ‘ಶ್ರೀರಾಮ ವಿದ್ಯಾಕೇಂದ್ರ’ದ ಹೆಸರಿನಲ್ಲಿ ನೋಂದಾಯಿಸದೇ ಬೇರೆಯದ್ದೇ ಟ್ರಸ್ಟ್ ಒಂದರ ಮಾಲಕತ್ವದಲ್ಲಿ ಇರಿಸಲಾಗಿತ್ತು ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ಅಗತ್ಯ ಕಾನೂನು ದಾಖಲೆಗಳನ್ನು ಹೊಂದಿರದ ಹಾಗೂ ವಿದ್ಯಾರ್ಥಿಗಳ ಜೀವಕ್ಕೆ ಅಪಾಯವನ್ನುಂಟುಮಾಡುವಂತಹ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಬೇಜವಾಬ್ದಾರಿಯಿಂದ ಚಲಾಯಿಸಲು ಕಾರಣರಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

    ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 109/2026, ಕಲಂ 125 ಬಿಎನ್‌ಎಸ್‌ (BNS) ಹಾಗೂ ಮೋಟಾರು ವಾಹನ ಕಾಯ್ದೆಯ (IMV Act) ಕಲಂ 196, 192(1) ರಂತೆ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

    Post Views: 2

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.