Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ, ದರೋಡೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ, ದರೋಡೆ

    December 23, 2022
    Share

    ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾನದಲ್ಲಿ ಡಿ.22 ರಂದು ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿದೆ.

    ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ರಾಬರಿ ಮಾಡಲಾಗಿದೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.

    ಘಟನೆ ವಿವರ:
    ರೋಹಿತ್ ಕುಮಾರ್ ಅವರು ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ಹೋಗಿದ್ದರು. ಪತ್ನಿ ಪವಿತ್ರ ಮನೆಯಲ್ಲಿರುತ್ತಿದ್ದರು. ಮಕ್ಕಳಿಬ್ಬರು ಗುರುವಾರ ಮೂಡಬಿದಿರೆಯಲ್ಲಿ ನಡೆಯುವ ಜಾಂಬೂರಿ ಕಾರ್ಯಕ್ರಮಕ್ಕೆ ತೆರಳಿದ್ದರು.

    ಸಂಜೆ ಸುಮಾರು 6.30 ರ ವೇಳೆ ಪವಿತ್ರ ಅವರು ಮನೆಯ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮನೆಯ ಮಾಡಿಗೆ ಕಲ್ಲು ಹೊಡೆದ ಶಬ್ದವಾಯಿತು, ಆ ಬಳಿಕ ಮನೆಯ ಕಿಟಕಿ ಬಾಗಿಲಿನ ಗಾಜಿಗೆ ಕಲ್ಲು ಎಸೆಯಲಾಗಿತ್ತು. ಸ್ನಾನ ಮಾಡಿ ಹೊರಬಂದು ನೋಡಿದಾಗ ಯಾರು ಕಾಣಲಿಲ್ಲ, ಯಾರು ಇಲ್ಲ ಅಂತ ವಾಪಾಸು ಬಾತ್ ರೂಮ್ ನ ಬಾಗಿಲು ಹಾಕಲು ಬರುವ ವೇಳೆ ಇಬ್ಬರು ಮುಸುಕುದಾರಿ ಅಪರಿಚಿತ ವ್ಯಕ್ತಿಗಳು ಏಕಾಏಕಿ ಪವಿತ್ರರನ್ನು ಎಳೆದುಕೊಂಡು ಹೋಗಿ ಮನೆಯ ಆಂಗಳದಲ್ಲಿದ್ದ ಅಡಿಕೆ ಮರದ ಕಂಬಕ್ಕೆ ನೈಲಾನ್ ಹಗ್ಗದಿಂದ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ.
    ಆ ಬಳಿಕ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕಾಣೆಯಾಗಿದೆ.ಮನೆಯೊಳಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಟೇಬಲ್ ಮೇಲೆ ಇದ್ದ ನಗದು 4 ಸಾವಿರ ಹಾಗೂ ಅಂಗಳದಲ್ಲಿದ್ದ ಅಡಿಕೆ ಗೋಣಿಯನ್ನು ಕೊಂಡುಹೋಗಿದ್ದಾರೆ ಹಾಗೂ ಕಪಾಟು ಒಳಗೆ ಜಾಲಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ಪವಿತ್ರ ಅವರನ್ನು ಕಟ್ಟಿ ಹಾಕಿದ ಬಗ್ಗೆ ಯಾರು ಕೂಡ ಗಮನಿಸಿಲ್ಲ, ಸುಮಾರು 7 ಅಂದಾಜಿಗೆ ಮನೆಯ ಸಮೀಪದ ಮನೆಯವರು ನೋಡಿ ಕಟ್ಟಿ ಹಾಕಿದನ್ನು ಬಿಚ್ಚಿದ ಬಳಿಕ ಘಟನೆಯ ಬಗ್ಗೆ ತಿಳಿದಿದೆ. ಬಿಜೆಪಿ ಮುಖಂಡ ಗಣೇಶ್ ರೈ ಮಾಣಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
    ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್. ಐ.ಹರೀಶ್ ಭೇಟಿ ನೀಡಿದ್ದಾರೆ.ಇಂದು ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಹರೀಶ್ ‌ಮಾಹಿತಿ ನೀಡಿದ್ದಾರೆ.

    Post Views: 167

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.