Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ, ದರೋಡೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಒಂಟಿ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ, ದರೋಡೆ

    December 23, 2022
    Share

    ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾನದಲ್ಲಿ ಡಿ.22 ರಂದು ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿದೆ.

    ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ರಾಬರಿ ಮಾಡಲಾಗಿದೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.

    ಘಟನೆ ವಿವರ:
    ರೋಹಿತ್ ಕುಮಾರ್ ಅವರು ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲಸಕ್ಕೆ ಹೋಗಿದ್ದರು. ಪತ್ನಿ ಪವಿತ್ರ ಮನೆಯಲ್ಲಿರುತ್ತಿದ್ದರು. ಮಕ್ಕಳಿಬ್ಬರು ಗುರುವಾರ ಮೂಡಬಿದಿರೆಯಲ್ಲಿ ನಡೆಯುವ ಜಾಂಬೂರಿ ಕಾರ್ಯಕ್ರಮಕ್ಕೆ ತೆರಳಿದ್ದರು.

    ಸಂಜೆ ಸುಮಾರು 6.30 ರ ವೇಳೆ ಪವಿತ್ರ ಅವರು ಮನೆಯ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮನೆಯ ಮಾಡಿಗೆ ಕಲ್ಲು ಹೊಡೆದ ಶಬ್ದವಾಯಿತು, ಆ ಬಳಿಕ ಮನೆಯ ಕಿಟಕಿ ಬಾಗಿಲಿನ ಗಾಜಿಗೆ ಕಲ್ಲು ಎಸೆಯಲಾಗಿತ್ತು. ಸ್ನಾನ ಮಾಡಿ ಹೊರಬಂದು ನೋಡಿದಾಗ ಯಾರು ಕಾಣಲಿಲ್ಲ, ಯಾರು ಇಲ್ಲ ಅಂತ ವಾಪಾಸು ಬಾತ್ ರೂಮ್ ನ ಬಾಗಿಲು ಹಾಕಲು ಬರುವ ವೇಳೆ ಇಬ್ಬರು ಮುಸುಕುದಾರಿ ಅಪರಿಚಿತ ವ್ಯಕ್ತಿಗಳು ಏಕಾಏಕಿ ಪವಿತ್ರರನ್ನು ಎಳೆದುಕೊಂಡು ಹೋಗಿ ಮನೆಯ ಆಂಗಳದಲ್ಲಿದ್ದ ಅಡಿಕೆ ಮರದ ಕಂಬಕ್ಕೆ ನೈಲಾನ್ ಹಗ್ಗದಿಂದ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ.
    ಆ ಬಳಿಕ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕಾಣೆಯಾಗಿದೆ.ಮನೆಯೊಳಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಟೇಬಲ್ ಮೇಲೆ ಇದ್ದ ನಗದು 4 ಸಾವಿರ ಹಾಗೂ ಅಂಗಳದಲ್ಲಿದ್ದ ಅಡಿಕೆ ಗೋಣಿಯನ್ನು ಕೊಂಡುಹೋಗಿದ್ದಾರೆ ಹಾಗೂ ಕಪಾಟು ಒಳಗೆ ಜಾಲಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
    ಪವಿತ್ರ ಅವರನ್ನು ಕಟ್ಟಿ ಹಾಕಿದ ಬಗ್ಗೆ ಯಾರು ಕೂಡ ಗಮನಿಸಿಲ್ಲ, ಸುಮಾರು 7 ಅಂದಾಜಿಗೆ ಮನೆಯ ಸಮೀಪದ ಮನೆಯವರು ನೋಡಿ ಕಟ್ಟಿ ಹಾಕಿದನ್ನು ಬಿಚ್ಚಿದ ಬಳಿಕ ಘಟನೆಯ ಬಗ್ಗೆ ತಿಳಿದಿದೆ. ಬಿಜೆಪಿ ಮುಖಂಡ ಗಣೇಶ್ ರೈ ಮಾಣಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
    ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್. ಐ.ಹರೀಶ್ ಭೇಟಿ ನೀಡಿದ್ದಾರೆ.ಇಂದು ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸುವ ಬಗ್ಗೆ ಎಸ್.ಐ.ಹರೀಶ್ ‌ಮಾಹಿತಿ ನೀಡಿದ್ದಾರೆ.

    Post Views: 188

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.