Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿ

    July 31, 2025
    Share

    ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ಆರಂಭಿಸಿದ್ದು, ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇದ್ದರೆ 0824-2005301ಕ್ಕೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದ್ದಾರೆ.

    ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೇ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದೆ. ದೂರುದಾರ ಸೂಚಿಸಿದ 5 ಸ್ಪಾಟ್‌ಗಳಲ್ಲಿ ಈಗಾಗಲೇ ಕಳೇಬರ ಹುಡುಕಾಟ ಮುಕ್ತಾಯವಾಗಿದೆ. ಆದರೆ ಇಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಈ ನಡುವೆ ಎಸ್‌ಐಟಿ ತಂಡ ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಿ 0824-2005301ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದೆ.

    ಮಾಸ್ಕ್ ಧರಿಸಿರುವ ಅನಾಮಿಕ ವ್ಯಕ್ತಿ ತಾನು ಈಗಾಗಲೇ ನೂರಾರು ಶವಗಳನ್ನು ನೇತ್ರಾವತಿ ನದಿ ತೀರದಲ್ಲಿ ಹೂತು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದ. ಅದರಂತೆ ನಿನ್ನೆ ಎಸ್‌ಐಟಿ ಆತ ತೋರಿಸಿದ್ದ ಜಾಗದಲ್ಲಿ ಉತ್ಖನನ ನಡೆಸಿತ್ತು. ಭಾರಿ ಮಳೆಯ ನಡುವೆಯೇ ತೀವ್ರ ಬಂದೋಬಸ್ತ್‌ನಲ್ಲಿ ಹುಡುಕಾಟ ನಡೆಸಲಾಗಿತ್ತು. ಆದರೆ ಆತ ತೋರಿಸಿದ ಮೊದಲ ಜಾಗದಲ್ಲಿ ಯಾವುದೇ ಅಸ್ಥಿಪಂಜರ ಸಿಕ್ಕಿರಲಿಲ್ಲ. ಬಳಿಕ ಆತನೇ ಗುರುತು ಮಾಡಿದ್ದ 2 ಹಾಗೂ 3ನೇ ಜಾಗದಲ್ಲೂ ಎಸ್‌ಐಟಿ ಟೀಂ ಜಾಲಾಡಿತ್ತು. ಆದರೆ ಅಲ್ಲೂ ಯಾವುದೇ ಅಸ್ಥಿಪಂಜರ, ಯಾವುದೇ ತಲೆ ಬುರುಡೆ ಸೇರಿದಂತೆ ಏನೊಂದು ಕುರುಹು ಪತ್ತೆಯಾಗಿರಲಿಲ್ಲ.

    ಜುಲೈ 28 ರಂದು ಧರ್ಮಸ್ಥಳ ಫೀಲ್ಡ್‌ಗೆ ಇಳಿದಿದ್ದ ಎಸ್‌ಐಟಿ ದೂರುದಾರನನ್ನ ಕರೆದೊಯ್ದು 13 ಸ್ಥಳ ಗುರುತು ಮಾಡಿತ್ತು. ನಿನ್ನೆ ಆತನ ಸಮ್ಮುಖದಲ್ಲೇ ನೇತ್ರಾವತಿ ತಟದಲ್ಲಿ ಗುಂಡಿ ತೋಡಲಾಗಿತ್ತು. ಆದರೆ ಅಲ್ಲಿ ಯಾವು ಶವ, ಅಸ್ಥಿಪಂಜರ ಸಿಕ್ಕಿರಲಿಲ್ಲ. ಬುಧವಾರ ನಾಲ್ಕು ಕಡೆ ಮತ್ತೆ ಅಗೆದು ಶೋಧ ನಡೆಸಲಾಗಿತ್ತು. ಇದು ರಿಸರ್ವ್‌ ಫಾರೆಸ್ಟ್ ಆಗಿರುವುದರಿಂದ ಜೆಸಿಬಿ ಬಳಕೆಗೆ ಬ್ರೇಕ್‌ ಬಿದ್ದಿದ್ದು ಕಾರ್ಮಿಕರಿಂದಲೇ ಗುಂಡಿ ಅಗೆಸಲಾಗಿತ್ತು.

    Post Views: 124

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.