Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆ ಸೂರ್ಯಗ್ರಹಣ : ಧರ್ಮಸ್ಥಳ ದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ
    ಇತ್ತೀಚಿನ ಸುದ್ದಿ

    ನಾಳೆ ಸೂರ್ಯಗ್ರಹಣ : ಧರ್ಮಸ್ಥಳ ದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ

    October 24, 2022
    Share

    ಆಕ್ಟೋಬರ್ 25ರಮಂಗಳವಾರದಂದು ಸೂರ್ಯಗ್ರಹಣ ಆವರಿಸಲಿರುವ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಆಗಲಿದ್ದು , ಭಕ್ತರು ಸಹಕರಿಸಬೇಕಾಗಿ ಕೋರಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ‌. ಮಂಗಳವಾರದಂದು ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿದ್ದು, ನಂತರ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 2:30ರವರೆಗೆ ಭೋಜನ ಪ್ರಸಾದದ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7:30ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.

    ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಸೂರ್ಯ ಗ್ರಹಣ ನಿಮಿತ್ತ ದೇವರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರ ಮಧ್ಯಾಹ್ನ ಎಂದಿನಂತೆ ದೇವಸ್ಥಾನದಲ್ಲಿ ಅನ್ನ ಪ್ರಸಾದವಿರುತ್ತದೆ. ಗ್ರಹಣ ಆರಂಭಗೊಳ್ಳುವ ಅವಧಿಯಿಂದ ಬಿಡುವವರೆಗೆ ಭಕ್ತರಿಗೆ ದೇವಸ್ಥಾನಕ್ಕೆ ಪ್ರವೇಶವಿದ್ದು, ದೇವಸ್ಥಾನದಲ್ಲಿ ಜಪಮಾಡಬಹುದು. ಆದರೆ ಈ ಅವಧಿಯಲ್ಲಿ ಯಾವುದೇ ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ.

    ಅದೇ ರೀತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ. ಅಕ್ಟೋಬರ್ 25ರಂದು ದೇವಸ್ಥಾನ ಇಡೀ ದಿನ ಬಾಗಿಲು ಮುಚ್ಚಲಿದೆ. ಆ ದಿನ ಯಾವುದೇ ಸೇವೆಗಳು, ಭೋಜನ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರ ಬೆಳಗ್ಗೆ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪೂಜಾ ಸೇವೆಗಳು, ದೇವರ ದರ್ಶನ ಆರಂಭಗೊಳ್ಳಲಿದೆ.

    Post Views: 209

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.