Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಟ: ಲಂಚ ಪ್ರಕರಣ- ಪೊಲೀಸ್ ಠಾಣಾ ಉಪನಿರೀಕ್ಷಕ ಅಮಾನತು
    ಇತ್ತೀಚಿನ ಸುದ್ದಿ

    ಕೋಟ: ಲಂಚ ಪ್ರಕರಣ- ಪೊಲೀಸ್ ಠಾಣಾ ಉಪನಿರೀಕ್ಷಕ ಅಮಾನತು

    December 11, 2023
    Share

    ಕೋಟ:  ಪೊಲೀಸ್ ಠಾಣಾ ಉಪನಿರೀಕ್ಷಕರೋರ್ವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ| ಅರುಣ್‌ ಕುಮಾರ್‌ ಅಮಾನತುಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿದ ಎಸ್‌.ಪಿ. ಡಾ| ಅರುಣ್‌ ಕುಮಾರ್‌ ಅವರು ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ.ಕಾಲೇಜೊಂದರ ಆಡಳಿತ ಮಂಡಳಿಯ ಗಲಾಟೆಗೆ ಸಂಬಂಧಿಸಿದಂತೆ ದೂರು ದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು.
    ಬಳಿಕ ಈ ಬಗ್ಗೆ ತನಿಖೆಯನ್ನು ನಡೆಸಲಾಗಿದ್ದು, ಇದೀಗ ಅಮಾನತುಗೊಳಿಸಲಾಗಿದೆ ಎಂದರು.ಅಚ್ಲಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್‌ ಮತ್ತು ಮಹಿಮಾ ಮಧು ಭಾಸ್ಕರ್‌ ಎಂಬುವವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು.ಘಟನೆಯ ಕುರಿತಂತೆ ಮಧು ಭಾಸ್ಕರ್‌ ವಿರುದ್ಧ ದೂರು ದಾಖಲಿಸುವಂತೆ ಹಾಗೂ ಮಹಿಮಾ ವಿರುದ್ಧದ ದೂರಿಗೆ ಬಿ.ರಿಪೋರ್ಟ್‌ ನೀಡುವಂತೆ ಆಗ ಕೋಟ ಠಾಣಾ ಉಪನಿರೀಕ್ಷಕರಾಗಿದ್ದ ಶಂಭು ಲಿಂಗಯ್ಯ ಅವರು ಲಂಚವನ್ನು ತೆಗೆದುಕೊಂಡಿದ್ದರು.ಜೊತೆಗೆ ಅವರ ಹತ್ತಿರದ ಸಂಬಂಧಿಕರೊಬ್ಬರ ಖಾತೆಗೆ ಸ್ವಲ್ಪ ಹಣವನ್ನು ಜಮಾ ಮಾಡಿಸಿಕೊಂಡಿದ್ದರು.ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ಎನ್ನಲಾದ ದಿನೇಶ್‌ ಗಾಣಿಗ ಕೋಟ ವೀಡಿಯೋ ಮೂಲಕ ಎಸ್‌.ಪಿ. ಅವರನ್ನು ವಿನಂತಿಸಿದ್ದರು.ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್‌ ಆಗಿತ್ತು. ಇನ್ನು ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ನಿಯೋಜಿಸಲಾಗಿತ್ತು.

    Post Views: 265

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.