Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿ ಜನತೆಗೆ ಸಿಹಿ ಸುದ್ದಿ: ಮಂಗಳೂರು -ಬೆಂಗಳೂರು ವಿಶೇಷ ರೈಲು ಸಂಚಾರ
    ಇತ್ತೀಚಿನ ಸುದ್ದಿ

    ಕರಾವಳಿ ಜನತೆಗೆ ಸಿಹಿ ಸುದ್ದಿ: ಮಂಗಳೂರು -ಬೆಂಗಳೂರು ವಿಶೇಷ ರೈಲು ಸಂಚಾರ

    July 24, 2022
    Share

    ಮಂಗಳೂರು: ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆ ಆರಂಭಿಸಲಾಗುವುದು. ಜುಲೈ 27 ರಿಂದ ಆಗಸ್ಟ್ 31 ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರಿನಿಂದ ಬೆಂಗಳೂರು ನಗರಕ್ಕೆ ರೈಲು ಸಂಚರಿಸಲಿದೆ.

    ಜುಲೈ 26 ರಿಂದ ಆಗಸ್ಟ್ 30ರವರೆಗೆ ಪ್ರತಿ ಭಾನುವಾರ, ಮಂಗಳವಾರ, ಗುರುವಾರ ಬೆಂಗಳೂರಿನಿಂದ ಮಂಗಳೂರಿಗೆ ರೈಲು ಸಂಚರಿಸಲಿದೆ.

    ಭಾರಿ ಮಳೆಯ ಕಾರಣ ಬೆಂಗಳೂರು -ಮಂಗಳೂರು ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಬೇಡಿಕೆ ಬಂದಿದೆ. ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ, ಮಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಸಿಟಿ ಜಂಕ್ಷನ್ ನಡುವೆ ಮೈಸೂರು ಮಾರ್ಗದಲ್ಲಿ ಜನವರಿ 26ರಿಂದ ಆಗಸ್ಟ್ 31ರವರೆಗೆ ವಾರದಲ್ಲಿ ಮೂರು ದಿನ ವಿಶೇಷ ರಾತ್ರಿ ರೈಲು ಸೇವೆಗೆ ರೈಲ್ವೆ ಮಂಡಳಿಯಿಂದ ಅನುಮೋದನೆ ನೀಡಲಾಗಿದೆ.

    ಭಾರಿ ಮಳೆ ಮತ್ತು ಭೂಕುಸಿತದ ಕಾರಣ ರಸ್ತೆ ಸಂಚಾರಕ್ಕೆ ತೊಂದರೆಯಾಗಿರುವುದರಿಂದ ಹೆಚ್ಚುವರಿ ರೈಲು ಒದಗಿಸಲು ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದು, ಸಂಸದರು ರೈಲ್ವೆ ಸಚಿವರನ್ನು ಭೇಟಿಯಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದರು.

    ರಾತ್ರಿ 8.30 ಕ್ಕೆ ಬೆಂಗಳೂರಿನಿಂದ ಹೊರಡಲಿರುವ ರೈಲು ಕೆಂಗೇರಿ, ರಾಮನಗರ, ಚನ್ನರಾಯಪಟ್ಟಣ, ಮಂಡ್ಯ, ಮೈಸೂರು ಜಂಕ್ಷನ್, ಕೃಷ್ಣರಾಜನಗರ, ಹೊಳೆನರಸೀಪುರ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕ ಪುತ್ತೂರು, ಮಂಗಳೂರು ಜಂಕ್ಷನ್ ಹಾಗೂ ಮಂಗಳೂರು ಸೆಂಟ್ರಲ್ ತಲುಪಲಿದೆ. ಮಂಗಳೂರಿನಿಂದ ಸಂಜೆ 6:35ಕ್ಕೆ ಹೊರಡುವ ರೈಲು ಬೆಳಗ್ಗೆ 6.15ಕ್ಕೆ ಬೆಂಗಳೂರು ಸಿಟಿ ಜಂಕ್ಷನ್ ತಲುಪಲಿದೆ.

    Post Views: 213

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.