Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಪ್ರಿಲ್ 18ರಿಂದ 24ರ ತನಕ ಪದವು ಶ್ರೀ ಶನೈಶ್ಚರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ
    ಇತ್ತೀಚಿನ ಸುದ್ದಿ

    ಮಂಗಳೂರು: ಎಪ್ರಿಲ್ 18ರಿಂದ 24ರ ತನಕ ಪದವು ಶ್ರೀ ಶನೈಶ್ಚರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

    April 16, 2026
    Share


    ಮಂಗಳೂರಿನ ಪದವು ಕುಲಶೇಖರದಲ್ಲಿ ಹಿಂದೂ ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರ ಶ್ರೀ ಶನೈಶ್ಚರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಎಪ್ರಿಲ್ 18ರಿಂದ 24ರ ತನಕ ಬಾಳಂಭಟ್ ಮನೆತನದ ಜ್ಯೋತಿಷ್ಯ ವಿದ್ವಾನ್ ವೇದಮೂರ್ತಿ ಎಂ. ಗಿರಿಧರ ಭಟ್ ಮತ್ತು ವೇದಮೂರ್ತಿ ಡಾ| ಸತ್ಯಕೃಷ್ಣ ಭಟ್ ಅವರ ನೇತೃತ್ವದಲ್ಲಿ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.


    ಹಿಂದೂ ಯುವಸೇನೆ ಪದವು ಶಾಖೆಯ ಧಾರ್ಮಿಕ ವಿಭಾಗವಾಗಿ ಕಳೆದ ಎರಡೂವರೆ ದಶಕಗಳಿಂದ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಶನೈಶ್ಚರ ಪೂಜಾ ಸಮಿತಿ (ರಿ.) ಶ್ರೀ ಸಗ್ರಹ ಮಖ ಶನೈಶ್ಚರ ಮಹಾಯಾಗವನ್ನು ಬಾಳಂಭಟ್ ಮನೆತನದ ವೇದಮೂರ್ತಿ ನಾರಾಯಣ ಭಟ್ ಅವರ ಮಾರ್ಗದರ್ಶನದಲ್ಲಿ 2000 ಹಾಗೂ 2018ರಲ್ಲಿ ನಡೆಸಲಾಗಿತ್ತು. ಶ್ರೀ ಸಗ್ರಹ ಮಖ ಶನೈಶ್ಚರ ಮಹಾಯಾಗವು 7 ದಿನಗಳ ಪರ್ಯಂತ ನಡೆದಿದ್ದು, ಧಾರ್ಮಿಕ ವಲಯದಲ್ಲಿ ಚರಿತ್ರೆ ನಿರ್ಮಿಸಿದ ಕಾರ್ಯಕ್ರಮವಾಗಿ ದಾಖಲಾಗಿದೆ. ಮಂಗಳೂರಿನ ಕುಲಶೇಖರದ ಪದವು ಮೇಗಿನಮನೆ ಬಳಿ 2010ರಲ್ಲಿ 600 ಚ.ಅಡಿಯಲ್ಲಿ ಶ್ರೀ ಶನೈಶ್ಚರ ಪೂಜಾ ಮಂದಿರವನ್ನು ನಿರ್ಮಿಸಿ ಶ್ರೀ ಶನಿದೇವರ ಆರಾಧನೆಯನ್ನು ನಡೆಸಲಾಗುತ್ತಿತ್ತು. 2023ರಲ್ಲಿ ಶ್ರೀ ಶನೈಶ್ಚರ ದೇವಸ್ಥಾನ ನಿರ್ಮಾಣ ಸಮಿತಿಯನ್ನು ರಚಿಸಿ, 10 ಸೆಂಟ್ಸ್ ಸ್ಥಳವನ್ನು ಖರೀದಿಸಿ, ನೂತನ ಶಿಲಾಮಯ ಶ್ರೀ ಶನೈಶ್ವರ ದೇವಸ್ಥಾನದ ಶಂಕುಸ್ಥಾಪನೆ ನಡೆಸಲಾಗಿತ್ತು.


    ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ಶ್ರೀ ಶನೈಶ್ಚರ ದೇವಸ್ಥಾನದಲ್ಲಿ ನದಗಹ ಸಹಿತ ಶ್ರೀ ಶನೈಶ್ಚರ, ಶ್ರೀ ಮಹಾಗಣಪತಿ ಹಾಗೂ ಶ್ರೀ ದುರ್ಗಾದೇವಿಯನ್ನು ಪ್ರತಿಷ್ಠಾಪಿಸಲಾಗುವುದು.


    ಎಪ್ರಿಲ್ 18, ಶನಿವಾರದಂದು ಸಾಮೂಹಿಕ ಪ್ರಾರ್ಥನೆಯಿಂದ ಮೊದಲ್ಗೊಂಡು 108 ಕಾಯಿ ಗಣಯಾಗ, ರುದ್ರಯಾಗ, ಲಕ್ಷ್ಮೀನಾರಾಯಣ ಪ್ರಧಾನ ಹೋಮ ಎಪ್ರಿಲ್ 22ರ ತನಕ ನಡೆಯಲಿದೆ. ಎಪ್ರಿಲ್ 23, ಗುರುವಾರದಂದು ಗಣಪತಿ, ದುರ್ಗಾ, ನವಗ್ರಹ ಸಹಿತ ಶ್ರೀ ಶನೈಶ್ಚರ ದೇವರ ಬಿಂಬ ಪ್ರತಿಷ್ಠೆ, ಶಿಖರ ಕೆಲಸ ಪ್ರತಿಷ್ಠೆ ಮತ್ತು ಶ್ರೀ ದೇವರಿಗೆ ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕವು ಜರಗಲಿದೆ. ಎಪ್ರಿಲ್ 24ರಂದು ಚಂಡಿಕಾಯಾಗ ಹಾಗೂ ಸಗ್ರಹ ಶನೈಶ್ಚರ ಮಹಾಯಾಗ ಸಂಪನ್ನಗೊಳ್ಳಲಿದೆ. ಪ್ರತಿದಿನ ವಿವಿಧ ಮಂಡಳಿಗಳಿಂದ ಭಜನೆ, ಅನ್ನಸಂತರ್ಪಣೆ, ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ.

    ಕಾವೇವರ ಮಹಾಕ್ಕೆಯ ಪುಣ್ಯಕಥಾನಕವನ್ನು ‘ಭಾಯಾನಂದನ ಯಕ್ಷಗಾನ ಬಯಲಾಟದ ಮೂಲಕ ಶ್ರೀ ಪಾವಂಜೆ ಮೇಳದವರು, ಎಪ್ರಿಲ್ 21ರಂದು ಹಾಗೂ ಶ್ರೀ ಲಲಿತೆ ಕಲಾವಿದರು ಎಪ್ರಿಲ್ 23ರಂದು ‘ಶನಿ ಮಹಾತ್ಮ’ ಏಳು ಪೌರಾಣಿಕ ನಾಟಕದ ಮೂಲಕ ಪ್ರದರ್ಶಿಸಲಿರುವರು. ಸೌದಾಮಿನಿ ರಾವ್ ಕಟಪಾಡಿ ಮತ್ತು ಬಳಗದವರಿಂದ ನೃತ್ಯರಂಜನ, ವಿಧಾತ್ರಿ ಕಲಾವಿದೆರ್ ಕುಡ್ಲ (ರಿ) ಇವರಿಂದ ‘ಜೈ ಹನುಮಾನ್” ಸಿನಿ ನಾಟಕ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ, ಜಗದೀಶ್ ಕದ್ರಿಯವರ ಸಂಯೋಜನೆಯಲ್ಲಿ ಕದ್ರಿ ಈವೆಂಟ್ ಪ್ರಸ್ತುತಿಯ ಭಕ್ತಿಸಂಗೀತ ಲಹರಿ” ಮೊದಲಾದ ಕಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.


    ಹೊರೆಕಾಣಿಕೆ ಮೆರವಣಿಗೆ : ಎಪ್ರಿಲ್ 19, ಆದಿತ್ಯವಾರ ಬೆಳಗ್ಗೆ 9.00 ಗಂಟೆಗೆ ಶರವು ಮಹಾಗಣಪತಿ ದೇವಸ್ಥಾನದಲ್ಲಿ
    ಶ್ರೀ ನೆರವು ರಾಘವೇಂದ್ರ ಶಾಸ್ತ್ರಿಗಳು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ನೂತನ ಶಿಲಾಬಿಂಬಗಳೊಂದಿಗೆ ದೇವಸ್ಥಾನದ ನಿತ್ಯೋಪಯೋಗಿ ಪರಿಕರಗಳು, ಬ್ರಹ್ಮಕಲಶಕ್ಕೆ ಬೇಕಾದ ಪರಿಕರಗಳು, ಹೊರಕಾಣಿಕೆ ಮೆರವಣಿಗೆಯಲ್ಲಿ ಸಾಗಲಿದೆ. ಹಿಂದೂ ಯುವಸೇನೆಯ ವಿವಿಧ ಶಾಖೆಗಳು, ಪರಿಸರದ ಸಂಘ ಸಂಸ್ಥೆಗಳು, ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ವಾಹನಗಳು ಪಾಲ್ಗೊಳ್ಳಲಿದೆ.


    ಹಿಂದೂ ಯುವಸೇನೆಯ ಸಮಾವೇಶ : ಶಿವಾಜಿ ಮಂಟಪದಲ್ಲಿ ಪ್ರತಿದಿನ ಸಂಜೆ ಧರ್ಮಸಭೆ ನಡೆಯಲಿದ್ದು, ಎಪ್ರಿಲ್ 19 ಆದಿತ್ಯವಾರ ಹಿಂದೂ ಯುವಸೇನೆಯ ಸಮಾವೇಶವು ಜರಗಲಿದೆ. ಹಿಂದೂ ಯುವಸೇನೆಯ ಹಿರಿಯ ನಾಯಕರು, ವಿವಿಧ ಶಾಖೆಗಳ ಸ್ವಯಂಸೇವಕರು, ಧಾರ್ಮಿಕ ನೇತಾರರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.


    ಮುಂದೆ ಶ್ರೀ ಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಇನ್ನೂ 20 ಸೆಂಟ್ಸ್ ಜಮೀನಿನ ಅವಶ್ಯಕತೆಯಿದ್ದು, ಭೂ ದಾನ ಯೋಜನೆಯ ಮೂಲಕ ನಿಧಿ ಸಂಗ್ರಹ ಅಭಿಯಾನ ಆರಂಭವಾಗಿದ್ದು, ಮಂಗಳೂರು ನಗರದಲ್ಲಿ 13 ವಲಯ ಸಮಿತಿಗಳನ್ನು ಹಾಗೂ ಶ್ರೀ ಮಹೇಶ್ ಶೆಟ್ಟಿ ತೆಳ್ಳಾರ್ ಅವರ ಆಧ್ಯಕ್ಷತೆಯಲ್ಲಿ ಮುಂಬೈ ಸಮಿತಿಯನ್ನು ರಚಿಸಲಾಗಿದೆ.

    ಪತ್ರಿಕಾಗೋಷ್ಠಿಯಲ್ಲಿ: ನಳಿನ್ ಕುಮಾ‌ರ್ ಕಟೀಲು, ಅಧ್ಯಕ್ಷರು ಬ್ರಹ್ಮಕಲಶೋತ್ಸವ ಸಮಿತಿ
    ಕದ್ರಿ ನವನೀತ ಶೆಟ್ಟಿ, ಅಧ್ಯಕ್ಷರು ದೇವಸ್ಥಾನ ನಿರ್ಮಾಣ ಸಮಿತಿ
    ಡಿ. ವೇದವ್ಯಾಸ ಕಾಮತ್, ಕಾರ್ಯಾಧ್ಯಕ್ಷರು ಬಹ್ಮಕಲಶೋತ್ಸವ ಸಮಿತಿ
    ರಾಮಚಂದ್ರ ಚೌಟ, ಅಧ್ಯಕ್ಷರು ಶ್ರೀ ಶನೈಶ್ಚರ ಪೂಜಾ ಸಮಿತಿ
    ಭಾಸ್ಕರಚಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬ್ರಹ್ಮಕಲಶೋತ್ಸವ ಸಮಿತಿ
    ವಿಜಯ ಅರುಣ್ ಅಧ್ಯಕ್ಷರು ಮಾತೃ ಮಂಡಳಿ

    Post Views: 64

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.