Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ಪೋಷಕರು; ಬಸ್ಸಿನಡಿಗೆ ಬಿದ್ದು ಮೃತಪಟ್ಟ ವಿದ್ಯಾರ್ಥಿಯ ನೇತ್ರದಾನ
    ಇತ್ತೀಚಿನ ಸುದ್ದಿ

    ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ಪೋಷಕರು; ಬಸ್ಸಿನಡಿಗೆ ಬಿದ್ದು ಮೃತಪಟ್ಟ ವಿದ್ಯಾರ್ಥಿಯ ನೇತ್ರದಾನ

    January 28, 2023
    Share

    ಕುಂದಾಪುರ: ಶನಿವಾರ ಬೆಳಿಗ್ಗೆ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ಸಿನಿಂದ ಆಯತಪ್ಪಿ ಬಸ್ ಚಕ್ರದಡಿ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಪೋಷಕರು ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

    ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿಗಳಾದ ನಾಗಪ್ಪ ಪೂಜಾರಿ ಜಲಜಾ ದಂಪತಿಗಳ ಪುತ್ರ ಸುದೀಪ್ ಪೂಜಾರಿ (20) ಯವರ ನೇತ್ರದಾನ‌ ಮಾಡಲಾಗಿದೆ.

    ಶನಿವಾರ ಬೆಳಿಗ್ಗೆ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಮನೆಯಾದ ಕಟ್ ಬೆಲ್ತೂರಿನಿಂದ ಸುದೀಪ್ ಸಂಚರಿಸುತ್ತಿದ್ದಾಗ ಹೆಮ್ಮಾಡಿ ಜಂಕ್ಷನ್ ಬಳಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂದಿನ ಚಕ್ರದಡಿಯಲ್ಲಿ ಸಿಲುಕಿ ಗಂಭೀರ ಗಾಯಗೊಂಡು ಆತ ಮೃತಪಟ್ಟಿದ್ದ.

    ಬಸ್ ಅಪಘಾತದಲ್ಲಿ ಮೃತಪಟ್ಟ ಸುದೀಪ್ ಅವರ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಿದ್ದು ನೇತ್ರ ತಜ್ಞೆ ಡಾ. ವಿಜಯಲಕ್ಷ್ಮಿ ಅವರು ನೇತ್ರದಾನದ ಮಹತ್ವದ ಬಗ್ಗೆ ಮೃತ ಸುದೀಪ್ ಪೂಜಾರಿ ಪೋಷಕರ ಬಳಿ ತಿಳಿಸಿದ್ದು ಇದಕ್ಕೆ ಪೋಷಕರು ಸಮ್ಮತಿ ಸೂಚಿಸಿದ ಹಿನ್ನೆಲೆ ಮಣಿಪಾಲದ ನುರಿತ ತಜ್ಞರ ತಂಡ ಆಸ್ಪತ್ರೆಗೆ ಆಗಮಿಸಿ ಪ್ರಕ್ರಿಯೆ ನಡೆಸಿದ್ದಾರೆ ಎಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ತಿಳಿಸಿದ್ದಾರೆ.

    ಮೃತ ಸುದೀಪ್ ಪೂಜಾರಿ ಬಡತನದ ಕುಟುಂಬದವರಾಗಿದ್ದು ತಂದೆ-ತಾಯಿ ಜೊತೆ ಮನೆಯಲ್ಲಿದ್ದು ಕೋಟೇಶ್ವರ ಕಾಗೇರಿಯಲ್ಲಿರುವ ಕಾಳಾವಾರ ವರದರಾಜ ಎಂ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಹಿರಿಯ ಸೋದರ ಹಾಗೂ ಸೋದರಿ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿ ಉದ್ಯೋಗಿಗಳಾಗಿದ್ದಾರೆ. ವೈದ್ಯರ ಸಲಹೆಯಂತೆ ಮಗನ ಕಣ್ಣುಗಳು ಇನ್ನೊಬ್ಬರ ಜೀವಕ್ಕೆ ಬೆಳಕಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ಮಾಡಿರುವುದಾಗಿ ಕುಟುಂಬ ಮೂಲಗಳು ತಿಳಿಸಿದೆ.

    Post Views: 192

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.