Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ
    ಇತ್ತೀಚಿನ ಸುದ್ದಿ

    ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ

    May 3, 2025
    Share

    ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ.

    ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ.

    ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ಸಹೋದರ ಆದಿಲ್ ಎಂಬಾತ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಸುಪಾರಿ ನೀಡಿದ್ದಾಗಿ ತಿಳಿಸಿದ್ದಾರೆ.

    ಇದರೊಂದಿಗೆ, ಅಣ್ಣ ಫಾಝಿಲ್ ಹತ್ಯೆ ಪ್ರತೀಕಾರಕ್ಕಾಗಿ ಆದಿಲ್ ಸುಹಾಸ್ ಶೆಟ್ಟಿ ಕೊಲೆಗೆ ಇಬ್ಬರು ಹಿಂದೂ ಯುವಕರನ್ನು ಬಳಸಿಕೊಂಡು ಪ್ರಕರಣವನ್ನು ತಿರುಚಲು ಖತರ್ನಾಕ್ ಪ್ಲಾನ್ ಮಾಡಿದ್ದಾನೆ ಎನ್ನಲಾಗಿದೆ.

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳಲ್ಲಿ ಅಬ್ದುಲ್ ಸಫ್ವಾನ್ ಪ್ರಮುಖ ಆರೋಪಿಯಾಗಿದ್ದು,ಕಳೆದ 2023ರಲ್ಲಿ ಅಬ್ದುಲ್ ಸಫ್ವಾನ್ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು.ಇತ್ತ ಸಫ್ವಾನ್‌ಗೆ ತನ್ನನ್ನು ಸುಹಾಸ್ ಶೆಟ್ಟಿ ಕೊಲೆ ಮಾಡುವ ಭಯ ಕಾಡುತ್ತಿತ್ತು ಈ ಹಿನ್ನೆಲೆಯಲ್ಲಿ ಸುಹಾಸ್ ಶೆಟ್ಟಿಯನ್ನು ಮುಗಿಸಲು ತೀರ್ಮಾನಿಸಿದ್ದ.

    ಅದಕ್ಕಾಗಿ ಫಾಜಿಲ್ ತಮ್ಮನನ್ನು ಸಂಪರ್ಕಿಸಿ ಕೊಲೆಯ‌ ಸ್ಕೆಚ್ ಹಾಕಿದ್ದರು. ಇತ್ತ ಆದಿಲ್ ಈ ಹತ್ಯೆಗೆ ಸಫ್ವಾನ್ ತಂಡಕ್ಕೆ ಬರೋಬ್ಬರಿ 5 ಲಕ್ಷ ರೂ. ಫಂಡಿಂಗ್ ಮಾಡಿದ್ದ. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿತ್ ಸಂಪರ್ಕ ಮಾಡುತ್ತಾರೆ.

    ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಶೆಟ್ಟಿಯ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಅನುಪಮ್ ಅಗರ್ವಾಲ್ ತಿಳಿಸಿದರು.

    Post Views: 244

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.