Facebook Twitter Instagram
    Saturday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಬಾಂಬ್’ ಇಟ್ಟಿದ್ದು ನಾನೇ: ಕೇರಳ ಸರಣಿ ಸ್ಪೋಟಕ ಪ್ರಕರಣದ ‘ಶಂಕಿತ ವ್ಯಕ್ತಿ’ ಪೊಲೀಸರಿಗೆ ಶರಣಾಗತಿ
    ಇತ್ತೀಚಿನ ಸುದ್ದಿ

    ‘ಬಾಂಬ್’ ಇಟ್ಟಿದ್ದು ನಾನೇ: ಕೇರಳ ಸರಣಿ ಸ್ಪೋಟಕ ಪ್ರಕರಣದ ‘ಶಂಕಿತ ವ್ಯಕ್ತಿ’ ಪೊಲೀಸರಿಗೆ ಶರಣಾಗತಿ

    October 29, 2023
    Share

    ಕೇರಳ: ಎರ್ನಾಕುಲಂನ ಪ್ರಾರ್ಥನಾ ಮಂದಿರವೊಂದರಲ್ಲಿ ಸುಧಾರಿತ ಐಇಡಿ ಸ್ಪೋಟಕವನ್ನು ಸ್ಪೋಟಿಸಿ, ಸರಣಿ ಸ್ಪೋಟಕವನ್ನು ನಡೆಸಲಾಗಿತ್ತು. ಇಂತಹ ಕನ್ವೆನ್ಷನ್ ಸೆಂಟರ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಅಂತ ತಪ್ಪೊಪ್ಪಿಕೊಂಡಿರುವಂತ ವ್ಯಕ್ತಿಯೋರ್ವ, ಪೊಲೀಸರಿಗೆ ಶರಣಾಗಿರೋದಾಗಿ ತಿಳಿದು ಬಂದಿದೆ.

    ಕೇರಳದ ಎರ್ನಾಕುಲಂ ಬಳಿಯಲ್ಲಿ ಕ್ರೈಸ್ತ ಸಮುದಾಯದವರ ಪ್ರಾರ್ಥನೆಯ ವೇಳೆಯಲ್ಲಿ ಸರಣಿ ಸ್ಪೋಟಕ ಪ್ರಕರಣ ಸಂಭವಿಸಿತ್ತು. ಈ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ 28ಕ್ಕೆ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೀಗೆ ಚಿಕಿತ್ಸೆ ಪಡೆಯುತ್ತಿರುವಂತ ಅನೇಕರ ಸ್ಥಿತಿ ಕೂಡ ಗಂಭೀರಗೊಂಡಿದೆ ಎನ್ನಲಾಗುತ್ತಿದೆ.

    ಈ ಸರಣಿ ಸ್ಪೋಟಕ ಪ್ರಕರಣದ ನಂತ್ರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಾಳೆ ಘಟನೆ ಕುರಿತಂತೆ ಮಹತ್ವದ ಚರ್ಚೆ ನಡೆಸೋದಕ್ಕೆ ಬೆಳಗ್ಗೆ 10 ಗಂಟೆಗೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ.

    ಮತ್ತೊಂದೆಡೆ ಸಿಎಂ ಪಿಣರಾಯಿ ವಿಜಯನ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿ, ಸ್ಪೋಟಕ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಘಟನೆಯ ಕುರಿತಂತೆ ಎನ್‌ಐಎ, ಎನ್‌ಎಸ್ ಜಿ ತಂಡದಿಂದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ತನಿಖೆ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.

    ಈ ಬೆನ್ನಲ್ಲೇ ಕೊಚ್ಚಿ ಮೂಲಕ ವ್ಯಕ್ತಿಯೋರ್ವ ಕೇರಳದ ಎರ್ನಾಕುಲಂ ಪ್ರಾರ್ಥನಾ ಮಂದಿರದಲ್ಲಿನ ಸರಣಿ ಸ್ಪೋಟಕಕ್ಕೆ ನಾನೇ ಕಾರಣ. ಪ್ರಾರ್ಥನಾ ಮಂದಿರದಲ್ಲಿ ಬಾಂಬ್ ಇಟ್ಟಿದ್ದು ನಾನೇ ಅಂತ ಒಪ್ಪಿಕೊಂಡು, ಶಂಕಿತ ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದಿರುವಂತ ಕೇರಳ ಪೊಲೀಸರು ತೀವ್ರವಾಗಿ ಘಟನೆ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

    Post Views: 189

    Related Posts

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡನ ವಿರುದ್ಧ ಎಫ್‌ಐಆರ್

    June 5, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.