Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ. ಜಿಲ್ಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು..!
    ಇತ್ತೀಚಿನ ಸುದ್ದಿ

    ದ.ಕ. ಜಿಲ್ಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು..!

    January 30, 2024
    Share

    ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳಲ್ಲಿ ಅಗ್ನಿ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಹಾಗೂ ತಾತ್ಕಾಲಿಕವಾಗಿ ಪರವಾನಿಗೆ ಅಮಾನುತುಗೊಳಿಸುವ ಆದೇಶವನ್ನು ದಂಡಾಧಿಕಾರಿ ಡಾ. ಆನಂದ್ ಕೆ ಅವರು ಹೊರಡಿಸಿದ್ದಾರೆ.

    ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡ್ಯಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಬೆನ್ನೆಲ್ಲೇ ದಂಡಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

    Explosive Act 1984 ಮತ್ತು Explosive Rules 2008ರ ನಿಯಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ ಎಲ್‌ಇ – 1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತ ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರು ಪರಿಶೀಲನೆ ಮಾಡಲು ಈ ಆದೇಶ ನೀಡಲಾಗಿದೆ.

    ಇನ್ನು ಸ್ಫೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ನಿರ್ಬಂಧಿಸಿ, ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

    ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮಂಗಳೂರು ಮತ್ತು ಪುತ್ತೂರು ಉಪವಿಭಾಗ ಅಧಿಕಾರಿ ಅವರಿಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ ನಿರ್ದೇಶನ ನೀಡಿದ್ದಾರೆ.

    Post Views: 207

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.