Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»5 ಶಂಕಿತ ಉಗ್ರರ ಬಂಧನ ಪ್ರಕರಣವನ್ನು NIA ಗೆ ವರ್ಗಾಯಿಸಿದ CCB
    ಇತ್ತೀಚಿನ ಸುದ್ದಿ

    5 ಶಂಕಿತ ಉಗ್ರರ ಬಂಧನ ಪ್ರಕರಣವನ್ನು NIA ಗೆ ವರ್ಗಾಯಿಸಿದ CCB

    November 2, 2023
    Share

    ಬೆಂಗಳೂರು : ಬೆಂಗಳೂರಲ್ಲಿ ಸ್ಫೋಟಕ್ಕೆ ಸಂಚಿಸಿದ ಐವರು ಶಂಕಿತ ಉಗ್ರರ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ಪ್ರಕರಣವನ್ನು ವರ್ಗಾಯಿಸಿದೆ.ಪ್ರಕರಣ ಸಂಬಂಧ ಎನ್​​ಐಎ ಅಧಿಕಾರಿಗಳು ಎಫ್​ಐಆರ್​ (FIR) ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ ಬಂಧಿತ ಶಂಕಿತ ಉಗ್ರರು.

    ಸದ್ಯ ಎನ್​ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

    ಈ ಐವರು ಶಂಕಿತ ಉಗ್ರರು ಬೆಂಗಳೂರು ನಗರದಲ್ಲಿ ಸರಣಿ ಸ್ಫೋಟಕ್ಕೆ ಸಂಚಿರೂಪಿಸಿದ್ದರು ಅಲ್ಲದೆ ಇವರು ಗ್ರೈನೆಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಸಹ ಸಂಗ್ರಹಿಸಿದ್ದರು.ಇದಕ್ಕೆ ಜೈಲಿನಲ್ಲಿ ಇದ್ದುಕೊಂಡೇ ಉಗ್ರ ಜುನೈದ್ ಇವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗುತ್ತಿತ್ತು.

    ಆರೋಪಿಗಳು ಸುಲ್ತಾನ್​ ಪಾಳ್ಯದ ಪ್ರಾರ್ಥನಾ ಸ್ಥಳ ಮತ್ತು ಆರ್​.ಟಿ ನಗರದ ಕನಕ ಬಡಾವಣೆಯ ಸೈಯದ್​ ಸುಹೇಲ್​ ಬಾಡಿಗೆ ಮನೆಯಲ್ಲಿ ಸಭೆ ಸೇರಿ ಉಗ್ರ ಚಟುವಟಿಕೆ ಹಾಗೂ ಸ್ಫೋಟ ನಡೆಸುವುದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಚರ್ಚೆ ನಡೆಸಿದ್ದರು. ಈ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕೇಂದ್ರ ಗುಪ್ತಚರ ಇಲಾಖೆ ಸಂಪರ್ಕಿಸಿದ್ದರು. ನಂತರ ಎರಡೂ ವಿಭಾಗದ ಸಿಬ್ಬಂದಿ ಇದೇ ವರ್ಷ ಜುಲೈ 19 ರಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.

    ಈ ಐವರು ಸಂಕಿತ ಉಗ್ರರನ್ನು ಬಂಧಿಸುವ ವೇಳೆ ಇವರ ಹತ್ತಿರ ಸಂಗ್ರಹಿಸಲಾಗಿದ್ದ ಎನ್ನಲಾದ 7 ನಾಡ ಪಿಸ್ತೂಲ್, 45 ಜೀವಂತ ಗುಂಡುಗಳು, ವಾಕಿಟಾಕಿಗಳು, 12 ಮೊಬೈಲ್​, ಡ್ರಾಗರ್​ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದರು. ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿ, ಅಪರಾಧದ ಒಳಸಂಚು, ಶಸ್ತ್ರಾಸ್ರ ಕಾಯ್ದೆ ಅಡಿ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇನ್ನೂ ಇವರಿಗೆ ಮಾನಿಟರ್ ಮಾಡುತ್ತಿದ್ದ ಉಘ್ರಜನೆ ವಿದೇಶದಲ್ಲಿ ತಲೆಮರ್ಸಿಕೊಂಡಿದ್ದು ಈತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದೀಗ ದೇವರು ಸಂಗೀತ ಉಗ್ರರ ಬಂಧನ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ವರ್ಗಾಯಿಸಿದೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.