Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರವಾಸಕ್ಕೆ ಬಂದಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರವಾಸಕ್ಕೆ ಬಂದಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವು

    January 8, 2025
    Share

    ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ.

    ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಾದ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದ ಬೀದರ್ ಜಿಲ್ಲೆಯ ಪರಮೇಶ್ವರ್, ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿಯ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ಎಂಬವರು ಈಜಾಡಲು ನೀರಿಗೆ ಇಳಿದಿದ್ದಾರೆ. ಆ ಸಂದರ್ಭದಲ್ಲಿ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಪರಮೇಶ್ವರ್ ಅಪಾಯದಿಂದ ಪಾರಾಗಿದ್ದಾರೆ. ಶಿವಕುಮಾರ್, ಸತ್ಯವೇಲು ಮತ್ತು ಮಂಜುನಾಥ್ ಅವರ ಮೃತದೇಹ ಜೆಟ್ಟಿಯ ಬಲಭಾಗದ ಮೂಲೆಯಲ್ಲಿ ಪತ್ತೆಯಾಗಿದೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

    ಈ ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನೇಹಿತರಾಗಿದ್ದರು. ಇವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಂಗಳೂರಿನ ಹೊಟೇಲ್‌ವೊಂದರಲ್ಲಿ ಬೆಳಗ್ಗಿನ ಉಪಹಾರ ಸೇವಿಸಿ ಬಳಿಕ ಮಧ್ಯಾಹ್ನದ ವೇಳೆಗೆ ಕುಳಾಯಿಜೆಟ್ಟಿ ಬಳಿಗೆ ಬಂದಿದ್ದಾರೆ. ಅಲ್ಲಿ ಎಲ್ಲರೂ ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭ ನಾಲ್ವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಮನಿಸುತ್ತಿದ್ದ ಸ್ಥಳೀಯ ಮೀನುಗಾರರು ನಾಲ್ವರ ರಕ್ಷಣೆಗೆ ಮುಂದಾದರಾದರೂ ಅಷ್ಟರಲ್ಲೇ ಮೂವರು ನೀರು ಪಾಲಾಗಿದ್ದರು. ಓರ್ವನನ್ನು ರಕ್ಷಿಸಿ ತಕ್ಷಣ ಆತನನ್ನು ನಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 240

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.