Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕಾರುಗಳಲ್ಲಿ ಟಿಂಟೆಡ್ ಗ್ಲಾಸ್ ನಿಷೇಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ
    ಕರಾವಳಿ ಸುದ್ದಿ

    ಕಾರುಗಳಲ್ಲಿ ಟಿಂಟೆಡ್ ಗ್ಲಾಸ್ ನಿಷೇಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ

    June 4, 2025
    Share

    ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ  1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ.

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 02-06-2025 ಮತ್ತು 03-06-2025 ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ ವಿರುದ್ದ ಒಟ್ಟು 223 ಪ್ರಕರಣವನ್ನು ದಾಖಲಿಸಿ, ರೂ. 1,11,500/- ದಂಡವನ್ನು ವಿಧಿಸಲಾಗಿದೆ. ಅಲ್ಲದೇ 223 ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ಕ್ರಮ ಕೈಗೊಂಡು ಅವರುಗಳಿಗೆ ತಿಳುವಳಿಕೆಯನ್ನು ಸಹ ನೀಡಲಾಗಿರುತ್ತದೆ.

    ಅಲ್ಲದೇ ದಿನಾಂಕ 03-06-2025 ರಂದು ಪೊಲೀಸ್ ಆಯುಕ್ತಕರ ಕಛೇರಿಯ ಸಭಾಂಗಣದಲ್ಲಿ ಹಾಗೂ ಪೊಲೀಸ್ ಠಾಣೆಗಳಲ್ಲಿ, ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಮ್, ಅಕ್ಸೆಸರಿಸ್ ಶಾಪ್, ಗ್ಯಾರೇಟ್, ಸ್ಟಿಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಹಾಜರಿದ್ದವರಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿತರು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್ಗಳನ್ನು ಅಳವಡಿಸದಂತೆ ಸೂಕ್ತ ಸೂಚನೆಗಳನ್ನು ಸಹ ನೀಡಲಾಗಿದೆ. ಸದ್ರಿ ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ.

    Post Views: 546

    dakshina kannada karnataka mangalore police rules

    Related Posts

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.