Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟ್ರಾಫಿಕ್ ದಂಡ ಪಾವತಿಗೆ ಮತ್ತೆ ರಿಯಾಯಿತಿ ಘೋಷಣೆ: ಶೇಕಡಾ 50ರಷ್ಟು ಡಿಸ್ಕೌಂಟ್
    ಇತ್ತೀಚಿನ ಸುದ್ದಿ

    ಟ್ರಾಫಿಕ್ ದಂಡ ಪಾವತಿಗೆ ಮತ್ತೆ ರಿಯಾಯಿತಿ ಘೋಷಣೆ: ಶೇಕಡಾ 50ರಷ್ಟು ಡಿಸ್ಕೌಂಟ್

    August 22, 2025
    Share

    ಬೆಂಗಳೂರು: ಟ್ರಾಫಿಕ್ ಉಲ್ಲಂಘನೆ ದಂಡ ಪಾವತಿ ಮಾಡಲು ಸಾರಿಗೆ ಇಲಾಖೆ ಮತ್ತೊಮ್ಮೆ ರಿಯಾಯಿತಿ ಘೋಷಿಸಿ ಆದೇಶಿಸಿದೆ. ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದ ವಾಹನ ಮಾಲೀಕರಿಗೆ ಬರೋಬ್ಬರಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗಿದೆ.

    ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅಧಿಕೃತ ಆದೇಶ ಹೊರಡಿಸಿದ್ದು, ದಂಡದ ಅರ್ಧದಷ್ಟು ಹಣ ತುಂಬಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದ್ದು, 50% ರಷ್ಟು ದಂಡ ಪಾವತಿ ಮಾಡಲು ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಅವಕಾಶ ನೀಡಲಾಗಿದೆ.

    ಈ ಫಿಫ್ಟಿ ಪರ್ಸೆಂಟ್ ಡಿಸ್ಕೌಂಟ್ ಆಫರ್ 2023ರ ಫೆಬ್ರವರಿ 11ರವರೆಗೆ ದಾಖಲಾದ ಪ್ರಕರಣಗಳಿಗೆ ಅನ್ವಯವಾಗಲಿದೆ. 2023ರ ಫೆಬ್ರವರಿ 12ರ ನಂತರದ ಪ್ರಕರಣಗಳಿಗೆ ಇದು ಅನ್ವಯವಾಗುವುದಿಲ್ಲ. ಯಾಕಂದ್ರೆ, ಬಹಳ ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡವರಿಗೆ ಈ ಆಫರ್ ನೀಡಲಾಗಿದೆ. ಇನ್ನುಳಿದಂತೆ 2023ರ ಫೆಬ್ರವರಿ 12ರ ನಂತರದ ಕೇಸ್​ ಗಳಿಗೆ ಮುಂದಿನ ವರ್ಷ ಆಫರ್ ನೀಡುವ ಸಾಧ್ಯತೆಗಳಿವೆ.

    ದಂಡ ಪಾವತಿ ಹೇಗೆ ಮಾಡಬೇಕು?
    ವಾಹನಗಳ ಮಾಲೀಕರು ತಮ್ಮ ವಾಹನದ ವಿರುದ್ಧ ಯಾವುದಾದರೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆಯೇ ಎಂದು ಆನ್‌ಲೈನ್‌ನಲ್ಲಿ ಪರಿಶೀಲಿಸಿ ದಂಡ ಪಾವತಿಸಬೇಕು.ಯಾವ ಸಂಚಾರ ನಿಯಮ ಉಲ್ಲಂಘಿಸಲಾಗಿದೆ, ದಿನಾಂಕ ಮತ್ತು ಸಮಯ, ಸಂಚಾರ ನಿಯಮ ಉಲ್ಲಂಘನೆಯಾದ ಸ್ಥಳದ ಫೋಟೋ ಸಮೇತ ಮಾಲೀಕರಿಗೆ ಆನ್‌ಲೈನ್‌ನಲ್ಲೇ ಮಾಹಿತಿ ಲಭ್ಯವಾಗುತ್ತಿದೆ. ಇನ್ನು ಬಾಕಿ ದಂಡ ಪಾವತಿಗೆ ಪೊಲೀಸ್‌ ಇಲಾಖೆಯು ನಗರದಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ. ಬೆಂಗಳೂರು ಒನ್‌ ಸೆಂಟರ್‌ ವೆಬ್‌ಸೈಟ್‌ನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮತ್ತು ದಂಡ ಬಾಕಿ ಉಳಿಸಿಕೊಂಡಿರುವ ವಿವರ ಪಡೆದು ದಂಡ ಪಾವತಿಸಬಹುದು. ಪೇಟಿಎಂ ಆ್ಯಪ್‌ ಮೂಲಕವೂ ದಂಡ ಕಟ್ಟಬಹುದು. ಸಂಚಾರ ಪೊಲೀಸ್‌ ಠಾಣೆಗಳಿಗೆ ವಾಹನದ ನೋಂದಣಿ ಸಂಖ್ಯೆ ಒದಗಿಸಿ ವಿವರ ಪಡೆದು ಬಾಕಿ ದಂಡ ಪಾವತಿಸಿ ರಶೀದಿ ಪಡೆಯಬಹುದು.

    ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯ ಸಂಚಾರಿ ಇ ಚಲನ್ ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ 50% ರಿಯಾಯಿತಿ ಇದ್ದು, 2023ರ ಫೆಬ್ರವರಿ 11ರ ಯಾರೆಲ್ಲಾ ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡಿದ್ದಿರೋ ಈ ಆಫರ್​ ಸದುಪಯೋಗಪಡಿಸಿಕೊಳ್ಳಬಹುದು.

    Post Views: 196

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.