Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜೈಲಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು..!!
    ಇತ್ತೀಚಿನ ಸುದ್ದಿ

    ಮಂಗಳೂರು: ಜೈಲಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು..!!

    April 5, 2025
    Share

    ಮಂಗಳೂರು: ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಆಳವಡಿಸಿದ ಕಾರಣ ಸುತ್ತಮುತ್ತಲಿನ ಪರಿಸರದಲ್ಲಿ ಉಂಟಾಗಿರುವ ಸಮಸ್ಯೆ ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಹಾಕಿದ ಪರಿಣಾಮ ಪರಿಸರದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಉಂಟಾಗಿದೆ. ಈ ಹಿನ್ನಲೆ ಬಿಜೆಪಿ ಇಂದು ಜೈಲಿನ ಎದುರು ಪ್ರತಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜೈಲಿನಲ್ಲಿ ಏಕಾಏಕಿ 5ಜಿ ಜಾಮರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜೈಲು ವಿಭಾಗದ ಡಿಜಿ, ಗೃಹ ಸಚಿವರು, ಪೊಲೀಸ್ ಕಮಿಷನರ್ ಗೆ ದೂರಿತ್ತರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ತೊಂದರೆ ಎದುರಿಸಿದರೂ ಕಾಂಗ್ರೆಸ್ ಸರ್ಕಾರ ಮೌನ ವಹಿಸಿದೆ. ನಮ್ಮ ಸರ್ಕಾರ ಇರುತ್ತಿದ್ದರೆ ಜೈಲಿಗೆ ನುಗ್ಗಿ ಜಾಮರ್ ಕಿತ್ತು ಬಿಸಾಕುತ್ತಿದ್ದೆ ಎಂದು ಹೇಳಿದರು.

    ಈಗಲೂ ನಾವು ಜೈಲಿಗೆ ಹೋಗಲು ಸಿದ್ಧ, ಜೈಲಿನಲ್ಲಿ ಹೇಗೂ ಮೊಬೈಲ್ ಸಿಗುತ್ತದೆ, ತೊಂದ್ರೆ ಇಲ್ಲ ಎಂದು ಹೇಳಿದ ಕಾಮತ್, ಜೈಲಿನ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಜಾಮರ್ ಅಗತ್ಯವಿದೆಯೇ? ಇವರು ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಜಾಮರ್ ಹಾಕಿದ್ದಾರೆ. ಮೂಗಿನಲ್ಲಿ ನೆಗಡಿ ಆಗಿದೆಯೆಂದು ಮೂಗು ಕತ್ತರಿಸುತ್ತೀರಾ..? ಇದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದರು. ‌ ಪ್ರತಿಭಟನೆ ಸಭೆಯ ಬಳಿಕ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಜೈಲಿನ ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಮೊದಲೇ ತಯಾರಾಗಿದ್ದ 50ಕ್ಕೂ ಹೆಚ್ಚು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

    Post Views: 255

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.