Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ- ಯುವಕನ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ- ಯುವಕನ ವಿರುದ್ಧ ಪ್ರಕರಣ ದಾಖಲು

    June 26, 2025
    Share

    ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನೋರ್ವನ ವಿರುದ್ಧ ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.

    ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ.

    ಪುತ್ತೂರಿನ ಬಪ್ಪಳಿಗೆ ನಿವಾಸಿ ಬಿಜೆಪಿ ಮುಖಂಡ ಹಾಗೂ ವಾಸ್ತುಶಿಲ್ಪಿ ಪಿ.ಜಿ ಜಗನ್ನಿವಾಸ್ ರಾವ್ ಎಂಬವರ ಪುತ್ರ ಪಿ.ಜಿ ಕೃಷ್ಣ ಜೆ. ರಾವ್ (21) ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

    ಈತನಿಂದ ವಂಚನೆಗೆ ಒಳಗಾದ ಯುವತಿಯೂ ಪುತ್ತೂರಿನ ನಿವಾಸಿಯಾಗಿದ್ದು, ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆರೋಪಿಯು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವತಿಯನ್ನು ಮನೆಗೆ ಕರೆತಂದು ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ಆರೋಪಿಸಲಾಗಿದೆ.

    ಈ ಬಗ್ಗೆ ನೊಂದ ಯುವತಿ ಜೂ. 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

    ದೂರಿನಲ್ಲಿ ತಿಳಿಸಿರುವಂತೆ 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಕೃಷ್ಣ ರಾವ್, ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದು, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಯತ್ನಿಸಿದ್ದು, ಯುವತಿ ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ ಹಾಗೂ ಈ ವಿಷಯವನ್ನು ರಹಸ್ಯವಾಗಿಡುವಂತೆ ತಿಳಿಸಿದ್ದ. ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಮನೆಗೆ ಕರೆಸಿ ಕೊಂಡು ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

    ಇದರಿಂದಾಗಿ ಯುವತಿ ಗರ್ಭವತಿಯಾಗಿದ್ದು, ಈ ವಿಚಾರವನ್ನು ತನ್ನ ತಂದೆ ತಾಯಿಗೆ ತಿಳಿಸಿದ್ದಾಳೆ. ಬಳಿಕ ಮನೆಯವರು ಯುವಕನ ಮನೆಯವರಿಗೆ ವಿಚಾರ ತಿಳಿಸಿದಾಗ ಮಾತುಕತೆ ನಡೆದು ಮದುವೆಗೆ ಹುಡುಗನ ಕಡೆಯವರು ಒಪ್ಪಿಗೆ ನೀಡಿದ್ದರು ಎಂದು ಯುವತಿ ತಿಳಿಸಿದ್ದಾಳೆ. ಆದರೆ, ಈಗ ಯುವತಿ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

    ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69 ರಂತೆ ಪ್ರಕರಣ ದಾಖಲಿಸಿ ಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    Post Views: 180

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.