Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ದ್ವಿಚಕ್ರ ವಾಹನ ಕಳವು ಪ್ರಕರಣ- ಅಂತರ್ ಜಿಲ್ಲಾ ಕಳ್ಳನ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ದ್ವಿಚಕ್ರ ವಾಹನ ಕಳವು ಪ್ರಕರಣ- ಅಂತರ್ ಜಿಲ್ಲಾ ಕಳ್ಳನ ಬಂಧನ

    December 31, 2025
    Share

    ಉಡುಪಿ: ಜಿಲ್ಲೆಯ ಶಿರ್ವ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಿರ್ವ, ಕಾಪು, ಬೆಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವುಗೈದ ಆರೋಪಿಯೋರ್ವನನ್ನು ಬಂಧಿಸಿ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

    ಬಂಧಿತ ಆರೋಪಿಯನ್ನು ಓಂ ಕೋಲಾರ ಎಂದು ಗುರುತಿಸಲಾಗಿದೆ.

    ಡಿ.5ರಂದು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕಿಂಗ್ ಮಾಡಿದ್ದ ವಾಹನ ಕಳವಾದ ಬಗ್ಗೆ ಮಹಿಳೆಯೋರ್ವರು ನೀಡಿದ ದೂರಿನಂತೆ ಶಿರ್ವ ಪೋಲಿಸರು ತನಿಖೆ ಪ್ರಾರಂಭಿಸಿದ್ದರು.

    ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಿ ಉಡುಪಿ, ಮಲ್ಪೆ ಕಾರ್ಕಳ, ಧರ್ಮಸ್ಥಳ ಕಡೆಗಳಲ್ಲಿ ಶೋಧ ಕಾರ್ಯ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಯಿಂದ ಶಿರ್ವ, ಕಾಪು, ಬೆಂಗಳೂರು ನಗರದಲ್ಲಿನ ಪೊಲೀಸ್ ಠಾಣೆಗಳಿಗೆ ಸಂಬಂಧಿಸಿದ ಒಟ್ಟು ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

    ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್ ನಾಯ್, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕ ಡಾ. ಹರ್ಷ ಪ್ರಿಯಂವದಾ ಹಾಗೂ ಕಾಪು ವೃತ್ತ ನಿರೀಕ್ಷಕ ಅಜಮತ್ ಅಲಿ ಮೇಲುಸ್ತುವಾರಿಯಲ್ಲಿ ಶಿರ್ವ ಪೊಲೀಸ್ ಠಾಣಾಧಿಕಾರಿ ಮಂಜುನಾಥ ಮರಬದ ಮತ್ತು ಲೋಹಿತ್ ಕುಮಾರ್ ಸಿ ಎಸ್ ಹಾಗೂ ಸಿಬಂದಿ ನೇತೃತ್ವದ ತಂಡ ಈ ಕಾರ್ಯಚರಣೆ ನಡೆಸಿದೆ.

    Post Views: 214

    Related Posts

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.