ಪುತ್ತೂರು: ವ್ಯಕ್ತಿಯೋರ್ವ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರಿನಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಸುಳ್ಯ ನಿವಾಸಿ ಸುರೇಶ್ ಎಂಬಾತ, ಬಡಗನ್ನೂರು ನಿವಾಸಿ ಸುರೇಖ(54) ಹಾಗು ಆಲಂಕಾರ್ ಕುಂತೂರು ನಿವಾಸಿ ಗಿರಿಜಾ(52) ಎಂಬುವರ ಮೇಲೆ ಹಲ್ಲೆ ನಡೆಸಿದ್ದಾನೆ. ಸುರೇಖ ಹಾಗು ಗಿರಿಜಾ ಅವರು ಗುಡ್ಡದಲ್ಲಿ ಅಣಬೆ ಹೆಕ್ಕುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಸುರೇಶ್ ಕುತ್ತಿಗೆಯನ್ನು ಬೀಗಿಯಾಗಿ ಹಿಡಿದು, ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಸುರೇಶ್ ನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಗಿರಿಜಾ ಹಾಗು ಸುರೇಖ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.