Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಉಡುಪಿ: ಗುಂಡೇಟು ತಗಲಿದ ಗರುಡ ಗ್ಯಾಂಗ್ ನ ಇಸಾಕ್ ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಶಿಫ್ಟ್‌
    ಕರಾವಳಿ ಸುದ್ದಿ

    ಉಡುಪಿ: ಗುಂಡೇಟು ತಗಲಿದ ಗರುಡ ಗ್ಯಾಂಗ್ ನ ಇಸಾಕ್ ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಶಿಫ್ಟ್‌

    March 14, 2025
    Share

    ಉಡುಪಿ:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ ಮಾ.12ರಂದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ನಾವುಂದ ಮೂಲದ ಇಸಾಕ್(27)ನನ್ನು ಶುಕ್ರವಾರ ಮಣಿಪಾಲ ಆಸ್ಪತ್ರೆಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ.

    ಬೆಂಗಳೂರಿನ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ದಲ್ಲಿ ಮಾ.4ರಂದು ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಇಸಾಕ್ ತನ್ನ ಕಾರಿನಲ್ಲಿ ಇತರ ವಾಹನ ಗಳಿಗೆ ಢಿಕ್ಕಿ ಹೊಡೆದು ತಪ್ಪಿಸಿಕೊಂಡಿದ್ದನು. ತನಿಖೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಇಸಾಕ್ ಹಾಗೂ ಆತನಿಗೆ ಸಹಕಾರ ನೀಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಮಾ.12ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಂಧಿಸಿತ್ತು.ಇವರನ್ನು ಖಾಸಗಿ ವಾಹನದಲ್ಲಿ ಮಣಿಪಾಲಕ್ಕೆ ಕರೆತರುವಾಗ ದಾರಿ ಮಧ್ಯೆ ಹಿರಿಯಡ್ಕ ಸಮೀಪ ಇಸಾಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದನು.ಈ ವೇಳೆ ಪೊಲೀಸ್ ನಿರೀಕ್ಷಕ ದೇವರಾಜ್ ಇಲಾಖಾ ಪಿಸ್ತೂಲಿನಿಂದ ಮೊದಲು ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದರು.

    ಬಳಿಕ ಇಸಾಕ್ ಪೊಲೀಸ್ ನಿರೀಕ್ಷಕರ ಕೈಯಲ್ಲಿದ್ದ ಪಿಸ್ತೂಲನ್ನು ಕಿತ್ತುಕೊಳ್ಳಲು ಮುನ್ನುಗ್ಗಿದನು. ಆಗ ಅವರು ಆತನ ಕಡೆ ಎರಡು ಸುತ್ತು ಗುಂಡು ಹಾರಿಸಿದ್ದು, ಅದರಲ್ಲಿ ಒಂದು ಗುಂಡು ಆತನ ಎಡಗಾಲಿಗೆ ತಾಗಿ ಆತ ಅಲ್ಲಿಯೇ ಕುಸಿದು ಬಿದ್ದನು ಎಂದು ತಿಳಿದುಬಂದಿದೆ.ಇನ್ನು ಗುಂಡೇಟು ತಗುಲಿ ತೀವ್ರವಾಗಿ ಗಾಯ ಗೊಂಡ ಇಸಾಕ್‌ನನ್ನು ಮೊದಲು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗಿತ್ತು.
    ಸದ್ಯ ಇಸಾಕ್‌ನನ್ನು ಕಾಲಿನ ಸರ್ಜರಿಗಾಗಿ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಗುರುವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಪೊಲೀಸರು ಸ್ಥಳಾಂತರ ಮಾಡಿದ್ದಾರೆ.
    ಇದೀಗ ಇಸಾಕ್ ಚೇತರಿಸಿಕೊಳ್ಳುತ್ತಿದ್ದು, ಸಂಪೂರ್ಣ ಗುಣಮುಖನಾದ ಬಳಿಕ ಆತನನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 261

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.