Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬಾಲಕಿ ನಾಪತ್ತೆ ಪ್ರಕರಣ ಗಂಟೆಯೊಳಗೆ ಸುಖಾಂತ್ಯ! -ಮಂಗಳೂರು ಪತ್ರಕರ್ತರಿಂದ ಕಾರ್ಯಾಚರಣೆ
    ಇತ್ತೀಚಿನ ಸುದ್ದಿ

    ಉಡುಪಿ: ಬಾಲಕಿ ನಾಪತ್ತೆ ಪ್ರಕರಣ ಗಂಟೆಯೊಳಗೆ ಸುಖಾಂತ್ಯ! -ಮಂಗಳೂರು ಪತ್ರಕರ್ತರಿಂದ ಕಾರ್ಯಾಚರಣೆ

    January 26, 2024
    Share

    ಉಡುಪಿ: ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಸಾರ್ವಜನಿಕರಲ್ಲಿ ಗೋಗರೆಯುತ್ತಿದ್ದ ತಂದೆಯಿಂದ ಮಾಹಿತಿ ಪಡೆದ ಪತ್ರಕರ್ತರು‌ ಬಾಲಕಿಯನ್ನು ಉಡುಪಿ ಪೊಲೀಸರ ಸಹಕಾರದೊಂದಿಗೆ ಗಂಟೆಯೊಳಗೆ ಪತ್ತೆಹಚ್ಚಿ ಹೆತ್ತವರ ವಶಕ್ಕೆ ಒಪ್ಪಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

    ಘಟನೆಯ ವಿವರ:
    ಮೂಲ್ಕಿ ಬಸ್ ಸ್ಟ್ಯಾಂಡ್ ಸಮೀಪ ರಾತ್ರಿ 7:30ರ ಸುಮಾರಿಗೆ ಘಟನೆ ನಡೆದಿದೆ. ಜೋಯಿಡಾಕ್ಕೆ ಹೊರಟಿದ್ದ ಮಂಗಳೂರಿನ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮೂಲ್ಕಿಯಲ್ಲಿ ಕಾರ್ ನಿಲ್ಲಿಸಿ ಸಮೀಪದ ಹೋಟೆಲ್ ಒಂದರಲ್ಲಿ ಚಹಾ ಕುಡಿದು ರಸ್ತೆ ಬದಿ‌ ನಿಂತಿದ್ದರು.ಈ ವೇಳೆ ಅಳುತ್ತಾ ದಾರಿಯಲ್ಲಿ ಹೋಗಿಬರುತ್ತಿದ್ದವರಲ್ಲಿ ಗೋಗರೆಯುತ್ತಿದ್ದ ವ್ಯಕ್ತಿಯೋರ್ವರು ಪತ್ರಕರ್ತರ ಮುಂದೆ ಮಗಳು ನಾಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಬಿಜಾಪುರಕ್ಕೆ ಹೊರಟಿದ್ದ ಮಹಿಳೆ ಹುಡುಗಿಯೊಬ್ಬಳು ಬಾಗಲಕೋಟೆಗೆ ತೆರಳುವ ಕೆ‌ಎಸ್‌ ಆರ್‌ ಟಿಸಿ ಬಸ್ ಹತ್ತಿರುವ ಸುಳಿವು ನೀಡಿದ್ದರು. ಈ ಮಾಹಿತಿಯಾಧಾರಿಸಿ ಪತ್ರಕರ್ತರು ಕೂಡಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಅವರಿಗೆ ವಿಡಿಯೋ, ಬಾಲಕಿಯ ಭಾವಚಿತ್ರ ಸಮೇತ ಮಾಹಿತಿ ನೀಡಿದ್ದಾರೆ. ಬಳಿಕ ಉಡುಪಿ ಕೆಎಸ್ ಆರ್ ಟಿಸಿ ನಿಲ್ದಾಣ ಅಧಿಕಾರಿಗೆ ಮಾಹಿತಿಯನ್ನು ರವಾನಿಸಿದ್ದಾರೆ. ತಕ್ಷಣ ಅಲರ್ಟ್ ಆದ ಪೊಲೀಸ್ ವರಿಷ್ಠಾಧಿಕಾರಿ ಅವರು ಕೆಎಸ್‌ ಆ‌ರ್‌‌ ಟಿಸಿ ಕಂಟ್ರೋಲರ್ ರಾಮ್ ಅವರಿಗೆ ಮಾಹಿತಿ ನೀಡಿ ಬಾಲಕಿಯನ್ನು ಹುಡುಕುವಂತೆ ಸೂಚನೆ ನೀಡಿದ್ದಾರೆ.ಅಷ್ಟರಲ್ಲಿ ಮಗುವಿನ ತಾಯಿ ಕೂಡಾ ಆಗಮಿಸಿದ್ದು ಬಾಲಕಿಯ ಮಾಹಿತಿಯನ್ನು ತಕ್ಷಣ ಉಡುಪಿ ಕಂಟ್ರೋಲ್ ರೂಮಿಗೆ ರವಾನಿಸಲಾಗಿತ್ತು. ಈ ಮಾಹಿತಿಯ ಆಧಾರದಲ್ಲಿ ಬಾಲಕಿ ಕೆಎಸ್‌ ಆರ್‌ ಟಿಸಿ ಬಸ್‌ ನಲ್ಲಿರುವುದು ಪತ್ತೆಯಾಗಿದೆ. ಕೆಎಸ್‌ ಆರ್‌ ಟಿಸಿ ಅಧಿಕಾರಿಗಳು ಮತ್ತು ಉಡುಪಿ ಪೊಲೀಸರು ಬಸ್ಸನ್ನು ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ತಡೆದು ನಿಲ್ಲಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಪತ್ರಕರ್ತರು ಪೋಷಕರ ಜೊತೆ ಉಡುಪಿಗೆ ತೆರಳಿ ಬಾಲಕಿಯನ್ನು ಕ್ಷೇಮವಾಗಿ ವಾಪಾಸ್ ಕರೆತಂದಿದ್ದಾರೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ‌ ಮೋಹನ್ ಕುತ್ತಾರ್, ಸದಸ್ಯರಾದ ಶಶಿ ಬೆಳ್ಳಾಯರು, ಗಿರೀಶ್ ಹಾಗೂ ಸಂದೇಶ್ ಶೆಟ್ಟಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು ಉಡುಪಿ ಪೊಲೀಸರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    Post Views: 234

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.