Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: ಕಾಂಗ್ರೆಸ್ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ- ಎಸ್‍ಡಿಪಿಐ ಕಾರ್ಯಕರ್ತನ ಬಂಧನ

    May 8, 2023
    Share

    ಉಳ್ಳಾಲ: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಸಂಭವಿಸಿದೆ.

    ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾದವರು. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ ಸಭೆಗೆ ತೆರಳುತ್ತಿದ್ದ ಕಾಂಗ್ರೆಸ್ ಪ್ರಚಾರದ ವಾಹನ ಎಸ್ ಡಿಪಿಐ ಅವರ ರ್‍ಯಾಲಿಗೆ ನಾಟೆಕಲ್ ಸಮೀಪ ಎದುರಾಗಿತ್ತು.

    ಈ ಸಂದರ್ಭ ಎಸ್ ಡಿಪಿಐ ಕಾರ್ಯಕರ್ತರ ಬೈಕ್ ಹಾಗೂ ರಿಕ್ಷಾ ರ್‍ಯಾಲಿಯಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಇದೇ ಸಂದರ್ಭ ಕಾಂಗ್ರೆಸ್ ಪರವಾದ ಹಾಡನ್ನು ಚುನಾವಣಾ ಪ್ರಚಾರ ವಾಹನದಲ್ಲಿ ಹಾಕಲಾಗಿತ್ತು. ಇದನ್ನು ಎಸ್‍ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿ, ನಿಲ್ಲಿಸುವಂತೆ ಸೂಚಿಸಿದ್ದರು.

    ಗಣನೆಗೆ ತೆಗೆದುಕೊಳ್ಳದ ಚಾಲಕ ವಾಹನಕ್ಕೆ ಅಡ್ಡ ಇದ್ದವರಿಗೆ ಹಾರ್ನ್ ಹಾಕಲು ಆರಂಭಿಸಿದ್ದಾರೆ. ಇದರಿಂದ ಕೆರಳಿದ ಎಸ್ ಡಿಪಿಐ ಕಾರ್ಯಕರ್ತರು ಚಾಲಕ ನೌಫಾಲ್ ಕಾಲರ್ ಪಟ್ಟಿ ಹಿಡಿದೆಳೆದು ಕೆನ್ನೆಗೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಐಫೋನ್ ಮೊಬೈಲನ್ನು ಕಸಿದಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಗಾಯಾಳು ನೌಫಾಲ್ ನನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಬೆಳಕಿಗೆ ಬರುತ್ತಿದ್ದಂತೆ ದೇರಳಕಟ್ಟೆ ಸಮೀಪ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದು, ತದನಂತರ ಓರ್ವ ಎಸ್ ಡಿಪಿಐ ಕಾರ್ಯಕರ್ತನನ್ನು ಹಿಡಿದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯಿಂದ ದೇರಳಕಟ್ಟೆಯಲ್ಲಿ ನಡೆಯುತ್ತಿದ್ದ ಎಸ್ ಡಿಪಿಐ ಸಾರ್ವಜನಿಕ ಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಘಟನಾ ಸ್ಥಳಕ್ಕೆ ಉಪ ಪೊಲೀಸ್ ಆಯುಕ್ತರುಗಳಾದ ಅಂಶು ಕುಮಾರ್ ಐಪಿಎಸ್, ಬಿ.ಪಿ ದಿನೇಶ್ ಕುಮಾರ್ , ಸಹಾಯಕ ಪೊಲೀಸ್ ಆಯುಕ್ತೆ ಧನ್ಯ ಎನ್. ನಾಯಕ್ ಹಾಗೂ ಉಳ್ಳಾಲ ಮತ್ತು ಕೊಣಾಜೆ ಠಾಣಾ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ.

    Post Views: 222

    Related Posts

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.