Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಚಿನ್ನಾಭರಣ ಕಳವು ಪ್ರಕರಣ- ಐವರ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: ಚಿನ್ನಾಭರಣ ಕಳವು ಪ್ರಕರಣ- ಐವರ ಬಂಧನ

    July 7, 2024
    Share

    ಮಂಗಳೂರು: ಉಳ್ಳಾಲ ಠಾಣೆ ವ್ಯಾಪ್ತಿಯ ಧರ್ಮನಗರದ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು  ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ  ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತರಲ್ಲಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿದ್ದಾರೆ.  ಇಬ್ಬರು ಅಪ್ರಾಪ್ತರು ಮತ್ತು  ಶ್ರೇಯಸ್ಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಬೆಳ್ತಂಗಡಿ  ಬಂಧಿತ ಆರೋಪಿಗಳಾಗಿದ್ದಾರೆ. ಕಳವು ಮಾಡಿದ ಚಿನ್ನಾಭರಣವನ್ನು  ಅಂಗಡಿಗಳಿಗೆ ಮಾರಾಟ ಮಾಡಿರುವು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಉಳ್ಳಾಲ  ಧರ್ಮನಗರ ನಿವಾಸಿ ಶ್ರೀಧರ್ ಎಂಬವರ ಮನೆಯಲ್ಲಿ ಜೂನ್ 8ರ ಬೆಳಗ್ಗೆ 8 ಗಂಟೆಯಿಂದ ಜೂ.16ರ ಮಧ್ಯಾಹ್ನ 12 ಗಂಟೆಯ ನಡುವೆ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ಉಳ್ಳಾಲ ಠಾಣೆಗೆ ಶ್ರೀಧರ್ ದೂರು ನೀಡಿದ್ದರು. ಮನೆಯ ಬೆಡ್ ರೂಮಿನ ಕಪಾಟಿನಲ್ಲಿರಿಸಿದ್ದ ಚಿನ್ನದ ಕರಿಮಣಿ ಸರ, ನೆಕ್ಲೇಸ್, ಚೈನ್, ಬ್ರಾಸ್ ಲೈಟ್, ಉಂಗುರಗಳು, ಕಿವಿ ಓಲೆಗಳು, ಕೈಬಳೆಗಳು ಸೇರಿದಂತೆ ಅಂದಾಜು 15 ಲಕ್ಷಕ್ಕೂ ಹೆಚ್ಚು ಮೌಲ್ಯದ 32 ಪವನ್ ಗಿಂತಲೂ ಹೆಚ್ಚು ತೂಕದ ಚಿನ್ನದ ಆಭರಣಗಳನ್ನು ಕಳವುಗೈದ ಬಗ್ಗೆ ದೂರಿನಲ್ಲಿ ತಿಳಿಸಿದ್ದರು. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಕೈಗೊಂಡ ಉಳ್ಳಾಲ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ರವರ ನೇತೃತ್ವದ ತಂಡ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಪೊಲೀಸ್ ಉಪ ಆಯುಕ್ತ ಸಿದ್ಧಾರ್ಥ ಗೋಯಲ್, ಪೊಲೀಸ್ ಉಪ ಆಯುಕ್ತ ಬಿ ಪಿ ದಿನೇಶ್ ಕುಮಾರ್ ಹಾಗೂ ಎ.ಸಿ.ಪಿ ದಕ್ಷಿಣ ಧನ್ಯ ನಾಯಕ್ ರವರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಲಾಗಿದೆ. ವಿವಿಧ ಚಿನ್ನಾಭರಣ ಅಂಗಡಿಗಳಿಗೆ ಮಾರಾಟ ಮಾಡಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಆರೋಪಿಗಳಾದ ಶ್ರೇಯಸ್ಸ್ ಬೆಳ್ತಂಗಡಿ, ಪೃಥ್ವಿರಾಜ್ ಉರ್ವ ಮತ್ತು ತೌಸೀಫ್ ಬೆಳ್ತಂಗಡಿ ರವರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಅವರುಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂಘರ್ಷಕ್ಕೊಳಗಾದ ಬಾಲಕರ ವಿರುದ್ಧ ಜೆ.ಜೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.

    Post Views: 240

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.