ಉಳ್ಳಾಲ : ದ್ವಿಚಕ್ರ ವಾಹನ ಕಳ್ಳನನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದು, ಆರೋಪಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್ ನಿವಾಸಿ ಹುಸೈನ್ ಜಾಹೀದ್ (24) ಎಂದು ಗುರುತಿಸಲಾಗಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಆರೋಪಿ ಅಕ್ಟೋಬರ್ 22 ರಂದು ಅಂಬ್ಲಮೊಗರು ಗ್ರಾಮದ ತಿಲಕನಗರ ಎಂಬಲ್ಲಿನ ಐಸಮ್ಮ ಎಂಬವರ ಹೋಂಡಾ ಡೀಯೋ ಮತ್ತು ನವೆಂಬರ್ 16 ರಂದು ದೇರಳಕಟ್ಟೆಯ ಗ್ರೀನ್ ಗ್ರೌಂಡ್ ಬಳಿ ಗುಲಾಮ್ ಹುಸೇನ್ ಎಂಬವರು ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ವಾಹನ ಕಳುವು ಮಾಡಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ತನಿಖೆಯನ್ನು ಕೈಗೆತ್ತಿಕೊಂಡಿದ್ದ ಕೊಣಾಜೆ ಠಾಣೆಯ ಪಿ.ಎಸ್.ಐ ಅಶೋಕ್ ಮತ್ತು ಸಿಬಂದಿ ಈ ಎರಡೂ ಪ್ರಕರಣಗಳ ಆರೋಪಿ ಹುಸೇನ್ ಜಾಹೀದ್ ನನ್ನು ಡಿಸೆಂಬರ್ 1 ರಂದು ಬಂಧಿಸಿ ಅಂಬ್ಲಮೊಗರು ಹಾಗೂ ದೇರಳಕಟ್ಟೆಯಲ್ಲಿ ಕಳ್ಳತನ ಮಾಡಿದ್ದ ಎರಡು ದ್ವಿಚಕ್ರ ವಾಹನಗಳನ್ನು ಹಾಗೂ ನಂಬರ್ ಪ್ಲೇಟ್ ಇಲ್ಲದ ಇನ್ನೊಂದು ಕೆಂಪು ಬಣ್ಣದ ಸುಜುಕಿ ಆ್ಯಕ್ಸೆಸ್ ಸ್ಕೂಟರನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.