Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಅಂಬೇಡ್ಕರ್ ಮತ್ತು ದಲಿತರಿಗೆ ಅವಹೇಳನ- ಹಿಂಜಾವೇ ಮುಖಂಡ ಉಮೇಶ್ ನಾಯ್ಕ್ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಅಂಬೇಡ್ಕರ್ ಮತ್ತು ದಲಿತರಿಗೆ ಅವಹೇಳನ- ಹಿಂಜಾವೇ ಮುಖಂಡ ಉಮೇಶ್ ನಾಯ್ಕ್ ಬಂಧನ

    October 13, 2024
    Share

    ಉಡುಪಿ: ಸಮಸ್ತ ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ್ ಸೂಡ ಎಂಬಾತನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.

    ಪೊಲೀಸರು ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

    ಹಿಂದೂ ಜಾಗರಣ ವೇದಿಕೆಯ ಮುಖಂಡನಾದ ಉಮೇಶ ನಾಯ್ಕ್, ದಕ್ಷಿಣ ಕನ್ನಡ ಮರಾಠೆ ಸಂರಕ್ಷಣಾ ಸಮಿತಿಯ ವಾಟ್ಸಪ್ ಗುಂಪಿನಲ್ಲಿ ಹಾಕಿದ ವಾಯ್ಸ್ ಮಸೇಜ್‌ನಲ್ಲಿ, ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನಕರ ರೀತಿಯ ಸಂದೇಶವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆದ ಬಳಿಕ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

    ನ.10ರಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಕರಾವಳಿ ಮರಾಠಿ ಸಮಾವೇಶವನ್ನು ಆಯೋಜಿಸಲಾಗಿದ್ದು, ಈ ಸಮಾವೇಶದ ಆಮಂತ್ರಣ ಪತ್ರಿಕೆಯ ಮುಖಪುಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೊ ಮುದ್ರಿಸಿರುವುದು ಉಮೇಶ ನಾಯ್ಕ್‌ನ ಕಂಗಣ್ಣಿಗೆ ಗುರಿಯಾಗಿತ್ತು. ಇದನ್ನೇ ನೆಪವಾಗಿರಿಸಿಕೊಂಡು ಆತ  ಅಂಬೇಡ್ಕರ್ ಹಾಗೂ ದಲಿತರನ್ನು ಅವಮಾನಿಸಿ ವಾಯ್ಸ್ ಮೆಸೇಜ್ ಹರಿಯಬಿಟ್ಟಿರುವುದಾಗಿ ವರದಿಯಾಗಿದೆ.

    Post Views: 255

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.